ಹಲ್ಲೆ ನಡೆಸಿದ ವ್ಯಕ್ತಿಗಳಿಗೆ ಸುವೇಂದು ಅಧಿಕಾರಿಯಿಂದ 'ಸನ್ಮಾನ' 
ದೇಶ

ಕೋಳಿ ಮಾಂಸ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳಿಗೆ ಸುವೇಂದು ಅಧಿಕಾರಿ 'ಸನ್ಮಾನ'

ಹಲ್ಲೆ ನಡೆಸಿದ ಆರೋಪಿಗಳಿಗೆ ಸನ್ಮಾನಿಸಿದ ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಸುವೇಂದು ಅಧಿಕಾರಿ, "ಹಿಂದೂವಾಗಿ" ಅವರ ಬೆಂಬಲಕ್ಕೆ ನಿಂತಿದ್ದೇನೆ ಎಂದು ಹೇಳಿದ್ದಾರೆ.

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆದ ಗೀತೆ ಪಠಣ ಕಾರ್ಯಕ್ರಮದಲ್ಲಿ ಇಬ್ಬರು ಕೋಳಿ ಮಾಂಸ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಮೂವರು ವ್ಯಕ್ತಿಗಳನ್ನು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಪಶ್ಚಿಮ ಬಂಗಾಳ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನು ಸನ್ಮಾನಿಸಿದ್ದಾರೆ.

ಹಲ್ಲೆ ನಡೆಸಿದ ಆರೋಪಿಗಳಿಗೆ ಸನ್ಮಾನಿಸಿದ ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಸುವೇಂದು ಅಧಿಕಾರಿ, "ಹಿಂದೂವಾಗಿ" ಅವರ ಬೆಂಬಲಕ್ಕೆ ನಿಂತಿದ್ದೇನೆ ಎಂದು ಹೇಳಿದ್ದಾರೆ.

ಡಿಸೆಂಬರ್ 7 ರಂದು ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ 'ಗೀತೆ ಪಾಠ' ಕಾರ್ಯಕ್ರಮದಲ್ಲಿ ಇಬ್ಬರು ಮಾಂಸ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬುಧವಾರ ರಾತ್ರಿ ಬಂಧಿಸಲ್ಪಟ್ಟ ಮೂವರು ವ್ಯಕ್ತಿಗಳಿಗೆ ಬ್ಯಾಂಕ್‌ಶಾಲ್ ನ್ಯಾಯಾಲಯವು ತಲಾ 1,000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದೆ.

ಇಂದು ಸನ್ಮಾನದ ಫೋಟೋವನ್ನು ಹಂಚಿಕೊಂಡಿರುವ ಅಧಿಕಾರಿ, ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ, "ನಿಮ್ಮ ನಿಷ್ಠಾವಂತ ಪೊಲೀಸರಿಂದ 'ಸನಾತನಿಗಳ'ನ್ನು ನಿಗ್ರಹಿಸಲು ಸಾಧ್ಯವಿಲ್ಲ ಎಂದು ನಾನು ಮಮತಾ ಬ್ಯಾನರ್ಜಿ(ಪಶ್ಚಿಮ ಬಂಗಾಳ ಸಿಎಂ) ಅವರಿಗೆ ಹೇಳಲು ಬಯಸುತ್ತೇನೆ" ಎಂದು ಹೇಳಿದ್ದಾರೆ.

"ಧರ್ಮವನ್ನು ರಕ್ಷಿಸುವ ಹೋರಾಟ ಮುಂದುವರಿಯುತ್ತದೆ ಮತ್ತು ಈ ಹೋರಾಟದಲ್ಲಿ, ಹಿಂದುತ್ವದ ಅಸಂಖ್ಯಾತ ಬೆಂಬಲಿಗರೊಂದಿಗೆ ನಾನು ಪ್ರತಿಯೊಬ್ಬ ಹಿಂದೂವಿನ ಜೊತೆ ನಿಲ್ಲುತ್ತೇನೆ" ಎಂದಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಅಧಿಕಾರಿ, ಭಾರತದಲ್ಲಿ ನ್ಯಾಯದ ಧ್ವನಿ ಇನ್ನೂ ಮೇಲುಗೈ ಸಾಧಿಸುತ್ತಿದೆ ಎಂದು ಹೇಳಿದರು.

"ನಾನು ಶಾಸಕ, ವಿರೋಧ ಪಕ್ಷದ ನಾಯಕ, ಬಿಜೆಪಿ ಸದಸ್ಯ ಎಲ್ಲವೂ ನಂತರ ಬರುತ್ತದೆ. ಮೊದಲು ನಾನು ಹಿಂದೂ. ನನ್ನ ಹಿಂದೂ ಸಹೋದರ ಸಹೋದರಿಯರು ತೊಂದರೆಯಲ್ಲಿದ್ದರೆ, ನನ್ನ ಪ್ರಾಥಮಿಕ ಕರ್ತವ್ಯ ನನ್ನ 'ಧರ್ಮ'ವನ್ನು ರಕ್ಷಿಸುವುದು. ಗೀತೆ ನನಗೆ ಕಲಿಸಿದ್ದು ಅದನ್ನೇ" ಎಂದು ಅಧಿಕಾರಿ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

SCROLL FOR NEXT