ಪಳನಿಸ್ವಾಮಿ 
ದೇಶ

ಮೇಕೆದಾಟು ಅಣೆಕಟ್ಟು ಯೋಜನೆ: ಇದೇ ಕರ್ನಾಟಕದ ಪ್ರಮುಖ ಗುರಿ! ಡಿಎಂಕೆಯ ದ್ರೋಹವನ್ನು ಕ್ಷಮಿಸಲು ಸಾಧ್ಯವಿಲ್ಲ- ಪಳನಿಸ್ವಾಮಿ

ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಮಿಳುನಾಡು ಜನರ ಜೀವನೋಪಾಯದ ವಿಷಯವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿನ ಪರವಾಗಿ ಬಲವಾದ ವಾದ ಮಂಡಿಸಲಿಲ್ಲ ಎಂದು ಪಳನಿಸ್ವಾಮಿ ದೂರಿದ್ದಾರೆ.

ಚೆನ್ನೈ: ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕಾರ್ಯಗತಗೊಳಿಸುವ ಮೂಲಕ ತಮಿಳುನಾಡನ್ನು ಮರುಭೂಮಿಯನ್ನಾಗಿ ಪರಿವರ್ತಿಸುವುದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಏಕೈಕ ಗುರಿಯಾಗಿದೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ.

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ವ್ಯತಿರಿಕ್ತ ಪರಿಣಾಮಗಳನ್ನು ಕಡೆಗಣಿಸಿ ಮೇಕೆದಾಟುನಲ್ಲಿ ಸಮತೋಲನ ಜಲಾಶಯವನ್ನು ನಿರ್ಮಿಸುವ ತನ್ನ ಯೋಜನೆಯೊಂದಿಗೆ ಮುಂದುವರಿಯುತ್ತಿದೆ. ಈ "ದುರದೃಷ್ಟಕರ ಪರಿಸ್ಥಿತಿಗೆ" ರಾಜ್ಯದಲ್ಲಿನ ಆಡಳಿತಾರೂಢ ಡಿಎಂಕೆ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಮಿಳುನಾಡು ಜನರ ಜೀವನೋಪಾಯದ ವಿಷಯವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿನ ಪರವಾಗಿ ಬಲವಾದ ವಾದ ಮಂಡಿಸಲಿಲ್ಲ. ಅರೆಮನಸ್ಸಿನಿಂದ ನಡೆಸಿತು ಎಂದು ಆರೋಪಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ನಂತರ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆ ಕಾಮಗಾರಿ ತ್ವರಿತಗೊಳಿಸಲು ತಜ್ಞರ ತಂಡವನ್ನು ರಚಿಸಿರುವ ಹಿನ್ನೆಲೆಯಲ್ಲಿ ಪಳನಿಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

ಡಿಎಂಕೆ ಅಧಿಕಾರಕ್ಕೆ ಬಂದಾಗಲೆಲ್ಲಾ ಕಾವೇರಿ ನದಿ ನೀರಿನ ವಿಷಯದಲ್ಲಿ ಕರ್ನಾಟಕಕ್ಕೆ ತಮಿಳುನಾಡು ಹಕ್ಕುಗಳನ್ನು ಬಿಟ್ಟುಕೊಟ್ಟಿದೆ. ಡಿಎಂಕೆಯ ಈ ದ್ರೋಹವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದಿರುವ ಅವರು, ಕಾವೇರಿ ಮೇಲಿನ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಲು ಮುಖ್ಯಮಂತ್ರಿಗಳು ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT