ಸಂಬೀತ್ ಪಾತ್ರ 
ದೇಶ

Vote chori ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ನುಸುಳುಕೋರರನ್ನು ರಕ್ಷಿಸುವ ಪ್ರಯತ್ನ ಎಂದ ಬಿಜೆಪಿ!

ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಈ ಹೋರಾಟ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಆರೋಪಿಸಿದೆ.

ಭಾರತದ ಪ್ರಜಾಪ್ರಭುತ್ವ ಸದೃಢವಾಗಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಜನರನ್ನು ದಾರಿತಪ್ಪಿಸುವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು "ಅವಮಾನಿಸುವ ಮತ್ತು ಮಾನಹಾನಿ ಮಾಡುವ ಸಂಚಿನಲ್ಲಿ ಕಾಂಗ್ರೆಸ್ ಯಶಸ್ವಿಯಾಗುವುದಿಲ್ಲ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚುನಾವಣಾ ಸುಧಾರಣೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ತಮ್ಮ ವಿರುದ್ಧದ ಸುಳ್ಳು ಆರೋಪಗಳಿಗೆ ಪಾಯಿಂಟ್-ಬೈ-ಪಾಯಿಂಟ್ ಪ್ರತ್ಯಾರೋಪದ ಮೂಲಕ ವಿಪಕ್ಷಗಳಿಗೆ ಮುಖಭಂಗ ಉಂಟು ಮಾಡಿದ್ದರು. ಇದಕ್ಕಾಗಿ ಕಾಂಗ್ರೆಸ್ ಈ ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ. 40ರಷ್ಟು ಹೊರೆ! ವಿಶೇಷತೆ ಏನು?

ಮಂಡ್ಯ To ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!

ನಿತಿನ್ ನಬಿನ್ ನೇರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ನೇಮಕ ಆಗಲಿಲ್ಲ ಏಕೆ?: ಕಾರ್ಯಾಧ್ಯಕ್ಷರ ಪಾತ್ರವೇನು?

Video: ಧಾರ್ಮಿಕ ಆಚರಣೆ ವೇಳೆ ಗುರಾಣಿಯಿಂದ ಬಾರಿಸಿದ ತೆಯ್ಯಂ, ಕುಸಿದು ಪ್ರಜ್ಞೆ ತಪ್ಪಿದ ಯುವಕ, ಇಷ್ಟಕ್ಕೂ ಆಗಿದ್ದೇನು?

ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆ; ಬಿಜೆಪಿ ಸೇರಿದ ತೇಜಸ್ವಿ ಘೋಸಲ್ಕರ್

SCROLL FOR NEXT