ಸಿಎಂ ಒಮರ್ ಅಬ್ದುಲ್ಲಾ 
ದೇಶ

ಕಾಂಗ್ರೆಸ್ 'ವೋಟ್ ಚೋರಿ' ವಿವಾದ: ಇದಕ್ಕೂ 'ಇಂಡಿಯಾ ಬಣ'ಕ್ಕೂ ಯಾವುದೇ ಸಂಬಂಧ ಇಲ್ಲ- ಸಿಎಂ ಒಮರ್ ಅಬ್ದುಲ್ಲಾ; Video

ಒಮರ್ ಅಬ್ದುಲ್ಲಾ ಅವರ 'ನ್ಯಾಷನಲ್ ಕಾನ್ಫರೆನ್ಸ್' ಇಂಡಿಯಾ ಬಣದಲ್ಲಿರುವ ಪ್ರಮುಖ ಮಿತ್ರಪಕ್ಷವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ.

ಜಮ್ಮು: ಕಾಂಗ್ರೆಸ್ ಎತ್ತಿರುವ 'ವೋಟ್ ಚೋರಿ' ವಿವಾದದಿಂದ ದೂರ ಉಳಿದಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದಕ್ಕೂ ಇಂಡಿಯಾ ಬಣ'ಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ವೋಟ್ ಚೋರ್ ಗಡ್ಡಿ ಛೋಡ್' ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಒಮರ್ ಅಬ್ದುಲ್ಲಾ ಅವರ 'ನ್ಯಾಷನಲ್ ಕಾನ್ಫರೆನ್ಸ್' ಇಂಡಿಯಾ ಬಣದಲ್ಲಿರುವ ಪ್ರಮುಖ ಮಿತ್ರಪಕ್ಷವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ.

'ಮತ ಚೋರಿ' ಮತ್ತು ಚುನಾವಣಾ ಅಕ್ರಮ ಕುರಿತು ಕಾಂಗ್ರೆಸ್ ಆರೋಪಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಬ್ದುಲ್ಲಾ, ಇದಕ್ಕೂ ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಪ್ರತಿಯೊಂದು ರಾಜಕೀಯ ಪಕ್ಷವು ತನ್ನದೇ ಆದ ಅಜೆಂಡಾ ರೂಪಿಸಲು ಸ್ವತಂತ್ರವಾಗಿದೆ. ಕಾಂಗ್ರೆಸ್ 'ವೋಟ್ ಚೋರಿ' ಮತ್ತು ಎಸ್‌ಐಆರ್ ಅನ್ನು ತನ್ನ ಮುಖ್ಯ ವಿಷಯವನ್ನಾಗಿ ಮಾಡಿಕೊಂಡಿದೆ. ಇದನ್ನು ಮಾಡಬೇಡಿ ಎಂದು ಹೇಳಲು ನಾವು ಯಾರು? ಎಂದರು.

ಈ ಮಧ್ಯೆ 'ಮತಗಳ್ಳತನದ ವಿರುದ್ಧ ಸುಮಾರು ಆರು ಕೋಟಿ ಸಹಿಗಳನ್ನು ಸಂಗ್ರಹಿಸಿದ್ದೇವೆ ಮತ್ತು ಅದನ್ನು ಭಾರತದ ರಾಷ್ಟ್ರಪತಿಗಳಿಗೆ ಪ್ರಸ್ತುತಪಡಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!

ರಾಹುಲ್ ವಿರುದ್ಧ ಸರ್ಕಾರ ಹಕ್ಕುಚ್ಯುತಿ ಮಂಡಿಸುವ ಸಾಧ್ಯತೆ ಇಲ್ಲ, ಆದರೆ...

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆ; ಪರಮೇಶ್ವರ ಜತೆ ಸಭೆ ಸಕಾರಾತ್ಮಕ- ಸರ್ಕಾರದ ಅಂಗಳದಲ್ಲಿ ಚೆಂಡು!

SCROLL FOR NEXT