ಸೋನಿಯಾ ಗಾಂಧಿ, ರಾಹುಲ್ ಗಾಂಧಿ 
ದೇಶ

National Herald case: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಈ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ರದ್ದುಗೊಳಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರ ಐವರಿಗೆ ಸಮಾಧಾನ ತರುವ ರೀತಿಯಲ್ಲಿ ತೀರ್ಪು ನೀಡಿರುವ ದೆಹಲಿ ಕೋರ್ಟ್, ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ಮಂಗಳವಾರ ನಿರಾಕರಿಸಿದೆ.

ಈ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ರದ್ದುಗೊಳಿಸಿದರು.

ಆದರೂ, ಆರೋಪಿಗಳಿಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಬಹುದು ಎಂದು ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ತೀರ್ಪು ನೀಡಿದ್ದಾರೆ.

ಅಕ್ಟೋಬರ್ 3 ರಂದು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW) ಎಫ್‌ಐಆರ್ ದಾಖಲಿಸಿದ್ದು, ಸೋನಿಯಾ ಗಾಂಧಿ ಕುಟುಂಬ, ಸ್ಯಾಮ್ ಪಿತ್ರೋಡಾ, ಸುಮನ್ ದುಬೆ, ಯಂಗ್ ಇಂಡಿಯನ್ ಮತ್ತು ಇತರರ ವಿರುದ್ಧ ವಂಚನೆ, ಅಪ್ರಾಮಾಣಿಕ ಆಸ್ತಿ ದುರುಪಯೋಗ ಮತ್ತು ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮತ್ತು ಕ್ರಿಮಿನಲ್ ಪಿತೂರಿಯ ಅಪರಾಧಗಳಿಗಾಗಿ ಆರೋಪಿಗಳೆಂದು ಹೆಸರಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 66 (2) ರ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ED) ಒದಗಿಸಿದ ಮಾಹಿತಿಯ ಆಧಾರದ ಮೇಲೆ ಈ ಎಫ್‌ಐಆರ್ ದಾಖಲು ಮಾಡಲಾಗಿದೆ. ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ದೃಷ್ಟಿಕೋನದಿಂದ ಇಡಿ ಈಗಾಗಲೇ ತನಿಖೆ ನಡೆಸುತ್ತಿದೆ. ಆ ಪ್ರಕ್ರಿಯೆಗಳು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಕ್ರಿಮಿನಲ್ ದೂರಿನ ಮೇರೆಗೆ ನ್ಯಾಯಾಲಯದ ಅರಿವಿನ ಆದೇಶವನ್ನು ಆಧರಿಸಿವೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಅಕ್ಟೋಬರ್ 4 ರಂದು, ಪೊಲೀಸರು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯಕ್ಕೆ FIR ನ ಪ್ರತಿಯನ್ನು ಸಲ್ಲಿಸಿದರು. ಎರಡು ದಿನಗಳ ನಂತರ, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ಪೊಲೀಸರಿಗೆ ಎಫ್ ಐಆರ್ ಬಗ್ಗೆ ಆರೋಪಿಗಳಿಗೆ ತಿಳಿಸಲು ಮತ್ತು ಅವರಿಗೆ ಪ್ರತಿಯನ್ನು ಒದಗಿಸುವಂತೆ ನಿರ್ದೇಶಿಸಿತು.

ಅಕ್ಟೋಬರ್ 8 ರಂದು, ಪೊಲೀಸರು ಈ ಆದೇಶವನ್ನು ಪ್ರಶ್ನಿಸಿದರು. ಈ ಪ್ರಕರಣವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (PC act) ವಿಶಾಲ್ ಗೋಗ್ನೆ ಅವರ ಮುಂದೆ ವಿಚಾರಣೆಗೆ ಒಳಪಡಿಸಲಾಯಿತು. ಅವರು ಅದೇ ದಿನ ಆದೇಶಕ್ಕೆ ತಡೆ ನೀಡಿದ್ದರು.

ಮ್ಯಾಜಿಸ್ಟ್ರೇಟ್ ಆದೇಶಗಳು ಯಾವುದೇ ಕಾನೂನು ನಿಬಂಧನೆಗಳನ್ನು ಉಲ್ಲೇಖಿಸದೆ ನ್ಯಾಯಾಂಗ ಅತಿಕ್ರಮಣದ ಪ್ರಕರಣವಾಗಿದೆ ಎಂದು ಪೊಲೀಸರು ವಾದಿಸಿದರು.

ಎಸಿಜೆಎಂ ನಿರ್ದೇಶನಗಳು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಮತ್ತು ಎಫ್‌ಐಆರ್‌ನ ಪ್ರತಿಯನ್ನು ಒದಗಿಸುವಂತೆ ನಿರ್ದೇಶಿಸಲು ಯಾವುದೇ ಆರೋಪಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿಲ್ಲ ಎಂದು ಸಹ ವಾದಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ. ಅಕ್ರಮ ಆಸ್ತಿ!

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ!

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ

SCROLL FOR NEXT