ಲೂತ್ರಾ ಸಹೋದರರು 
ದೇಶ

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ: ಲೂತ್ರಾ ಸಹೋದರರನ್ನು ದೆಹಲಿಗೆ ಕರೆತಂದ ಪೊಲೀಸರು! Video

ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೌರವ್ ಲುತ್ರಾ(44) ಮತ್ತು ಸೌರವ್ ಲುತ್ರಾ(40) ಸಹೋದರರ ವಿರುದ್ಧ ನರಹತ್ಯೆ ಮತ್ತು ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗಿದೆ.

ನವದೆಹಲಿ: ಡಿಸೆಂಬರ್ 6 ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಜನರನ್ನು ಬಲಿ ಪಡೆದ ಗೋವಾ ನೈಟ್‌ಕ್ಲಬ್‌ನ ಸಹ-ಮಾಲೀಕರಾದ ಗೌರವ್ ಲುತ್ರಾ ಮತ್ತು ಸೌರಭ್ ಲುತ್ರಾ ಅವರನ್ನು ಮಂಗಳವಾರ ಥೈಲ್ಯಾಂಡ್ ನಿಂದ ದೆಹಲಿಗೆ ಕರೆ ತರಲಾಗಿದೆ.

ಉತ್ತರ ಗೋವಾದ ಅರ್ಪೋರಾದಲ್ಲಿರುವ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್‌ಕ್ಲಬ್‌ನ ಸಹ-ಮಾಲೀಕರಾದ ಲುತ್ರಾ ಸಹೋದರರು, ಅಗ್ನಿ ಅವಘಡದ ನಂತರ ಥೈಲ್ಯಾಂಡ್‌ನ ಫುಕೆಟ್‌ಗೆ ಪರಾರಿಯಾಗಿದ್ದರು. ಅವರ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಯ್ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಭಾರತೀಯ ರಾಯಭಾರ ಕಚೇರಿಯ ಮಧ್ಯ ಪ್ರವೇಶದ ನಂತರ ಡಿಸೆಂಬರ್ 11 ರಂದು ಫುಕೆಟ್‌ನಲ್ಲಿ ಥಾಯ್ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ಇಂದು ಗಡೀರಪಾರು ಮಾಡಲಾಗಿದ್ದು, ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಇಂದು ಮಧ್ಯಾಹ್ನ ಗೌರವ್ ಲುತ್ರಾ ಮತ್ತು ಸೌರಭ್ ಲುತ್ರಾ ಅವರನ್ನು ಥೈಲ್ಯಾಂಡ್‌ನಿಂದ ದೆಹಲಿಗೆ ಕರೆತರಲಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಲೂತ್ರಾ ಸಹೋದರರು

ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಅವರನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು ಮತ್ತು ಹೆಚ್ಚಿನ ಕಾನೂನು ಕ್ರಮಗಳಿಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಇಬ್ಬರನ್ನು ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೌರವ್ ಲುತ್ರಾ(44) ಮತ್ತು ಸೌರವ್ ಲುತ್ರಾ(40) ಸಹೋದರರ ವಿರುದ್ಧ ನರಹತ್ಯೆ ಮತ್ತು ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗಿದೆ. ನೈಟ್‌ಕ್ಲಬ್ ಕಡ್ಡಾಯ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದು, ದುರಂತಕ್ಕೆ ಕಾರಣವಾಗಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಸೆಲ್ಫಿ ಕೇಳಿ ಬಂದ ಮಹಿಳಾ ಅಭಿಯಾನಿಯಿಂದ 'ಲಿಪ್ ಲಾಕ್': ತಬ್ಬಿಬ್ಬಾದ ಬಾಲಿವುಡ್ ನಟಿ ನಿಕಿತಾ ರಾವಲ್, Video ವೈರಲ್

ಕೋಲ್ಕತ್ತಾ ಬಳಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ: 'ಪ್ರಾಣವೇ ಹೋಗಬೇಕಾಗಿತ್ತು' ಎಂದ ಮಾಜಿ ಸಿಎಂ!