ಲಿಯೋನೆಲ್ ಮೆಸ್ಸಿ ಸಮಾರಂಭದಲ್ಲಿ ಅರೂಪ್ ಬಿಸ್ವಾಸ್ 
ದೇಶ

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: ಪಶ್ಚಿಮ ಬಂಗಾಳ ಕ್ರೀಡಾ ಸಚಿವರ ತಲೆದಂಡ; ಅರೂಪ್ ಬಿಸ್ವಾಸ್ ರಾಜೀನಾಮೆ!

ಅರೂಪ್ ಬಿಸ್ವಾಸ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬರೆದ "ರಾಜೀನಾಮೆ ಪತ್ರ"ವನ್ನು ಟಿಎಂಸಿ ವಕ್ತಾರ ಕುನಾಲ್ ಘೋಷ್ ಮಂಗಳವಾರ ಹಂಚಿಕೊಂಡಿದ್ದಾರೆ.

ಕೋಲ್ಕತ್ತಾ: ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಫ್ಯಾನ್ಸ್ ದಾಂಧಲೆ ಮತ್ತು ಅವ್ಯವಸ್ಥೆಗೆ ಸಂಬಂಧಿಸಿದಂತೆ ಟಿಎಂಸಿ ನೇತೃತ್ವದ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಇದೀಗ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರ ತಲೆದಂಡವಾಗಿದೆ.

ಅರೂಪ್ ಬಿಸ್ವಾಸ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬರೆದ "ರಾಜೀನಾಮೆ ಪತ್ರ"ವನ್ನು ಟಿಎಂಸಿ ವಕ್ತಾರ ಕುನಾಲ್ ಘೋಷ್ ಮಂಗಳವಾರ ಹಂಚಿಕೊಂಡಿದ್ದಾರೆ.

"ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕ್ರೀಡಾ ಇಲಾಖೆಯ ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ಪತ್ರದಲ್ಲಿ ಬರೆದಿದ್ದಾರೆ" ಎಂದು ಘೋಷ್ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

"ಡಿಸೆಂಬರ್ 13, 2025 ರಂದು, ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ವಿವೇಕಾನಂದ ಯುವ ಭಾರತಿ ಕ್ರೀಡಾಂಗಡ(ಸಾಲ್ಟ್ ಲೇಕ್) ಆಗಮಿಸಿದಾಗ ಉಂಟಾದ ದಾಂಧಲೆ ಬಗ್ಗೆ ತನಿಖೆಗೆ ನೀವು ಈಗಾಗಲೇ ಸಮಿತಿಯನ್ನು ರಚಿಸಿದ್ದೀರಿ. ನಿಷ್ಪಕ್ಷಪಾತ ತನಿಖೆಗಾಗಿ, ನಾನು ಪಶ್ಚಿಮ ಬಂಗಾಳ ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ನನ್ನ ವಿನಂತಿಯನ್ನು ಸ್ವೀಕರಿಸಬೇಕೆಂದು" ಎಂದು ಬಿಸ್ವಾಸ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ.

ಬಿಸ್ವಾಸ್ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಂಗೀಕರಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಮುಖ್ಯಮಂತ್ರಿ ಕಚೇರಿಯಿಂದ ತಕ್ಷಣ ಯಾವುದೇ ದೃಢೀಕರಣ ಬಂದಿಲ್ಲ.

ಟಿಎಂಸಿಯ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿಯ ಆಪ್ತರಾಗಿರುವ ಬಿಸ್ವಾಸ್ ಅವರು ಈ ವಿಷಯದ ಬಗ್ಗೆ ಇಲ್ಲಿಯವರೆಗೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!