ಅಪಘಾತ ಬಳಿಕ ಸುಟ್ಟುಹೋದ ಕರಕಲಾಗಿರುವ ಅವಶೇಷಗಳನ್ನು ತೆರವುಗೊಳಿಸುತ್ತಿರುವುದು. 
ದೇಶ

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇ: ದಟ್ಟ ಮಂಜಿನಿಂದ ಭೀಕರ ಅಪಘಾತ, ಹಲವು ವಾಹನಗಳಿಗೆ ಬೆಂಕಿ; 13 ಸಾವು, 66 ಮಂದಿ ಗಾಯ; Video

ಆಗ್ರಾ-ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ದಟ್ಟವಾದ ಮಂಜಿನಿಂದಾಗಿ ಗೋಚರತೆ ತೀರಾ ಕಡಿಮೆ ಇದ್ದಾಗ ಈ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮಂಗಳವಾರ ನಸುಕಿನ ಜಾವ ದಟ್ಟ ಮಂಜು ಕವಿದಿದ್ದರಿಂದ ದಾರಿ ಗೋಚರಿಸದೆ ಹಲವು ವಾಹನಗಳು ಸರಣಿ ಡಿಕ್ಕಿಯಾಗಿ ನಂತರ ಬೆಂಕಿ ಹತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 66 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ರಾ-ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ದಟ್ಟವಾದ ಮಂಜಿನಿಂದಾಗಿ ದಾರಿ ಸರಿಯಾಗಿ ವಾಹನ ಸವಾರರಿಗೆ ಗೋಚರಿಸದೆ ಈ ಭೀಕರ ಅಪಘಾತ ಸಂಭವಿಸಿದೆ.

ಕನಿಷ್ಠ ಏಳು ಬಸ್‌ಗಳು ಮತ್ತು ಮೂರು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿತು. ಡಿಕ್ಕಿಯ ರಭಸಕ್ಕೆ ಬೆಂಕಿ ಕಾಣಿಸಿಕೊಂಡು ವಾಹನಗಳು ಸಂಪೂರ್ಣ ಸುಟ್ಟುಹೋಗಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಿಸಲು ಮತ್ತು ಸಿಕ್ಕಿಬಿದ್ದ ಪ್ರಯಾಣಿಕರನ್ನು ರಕ್ಷಿಸಲು 11 ಅಗ್ನಿಶಾಮಕ ದಳಗಳನ್ನು ನಿಯೋಜಿಸಿದವು.

ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಅವರ ಪ್ರಕಾರ, ಬಲ್ದೇವ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲಿಗಲ್ಲು 127 ರ ಬಳಿ ಈ ಅಪಘಾತ ಸಂಭವಿಸಿದೆ.

ಜಿಲ್ಲಾಧಿಕಾರಿ ಮತ್ತು ಎಸ್‌ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸೇವೆಗಳು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಿದರು.

ರಸ್ತೆ ಅಡಚಣೆಯಾಗಿದ್ದರಿಂದ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಯಿತು. ಸಿಕ್ಕಿಬಿದ್ದ ಪ್ರಯಾಣಿಕರನ್ನು ನಂತರ ಸರ್ಕಾರಿ ವಾಹನಗಳಲ್ಲಿ ಅವರ ಸ್ಥಳಗಳಿಗೆ ಕಳುಹಿಸಲಾಯಿತು.

ಮೃತರಲ್ಲಿ ಇಬ್ಬರನ್ನು ಪ್ರಯಾಗ್‌ರಾಜ್ ನಿವಾಸಿ 44 ವರ್ಷದ ಅಖಿಲೇಂದ್ರ ಪ್ರತಾಪ್ ಯಾದವ್ ಮತ್ತು ಮಹಾರಾಜ್‌ಗಂಜ್ ಜಿಲ್ಲೆಯ 75 ವರ್ಷದ ರಾಂಪಾಲ್ ಎಂದು ಗುರುತಿಸಲಾಗಿದೆ ಎಂದು ಬಲದೇವ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಂಜನಾ ಸಚನ್ ತಿಳಿಸಿದ್ದಾರೆ.

ಸ್ಥಳದಲ್ಲಿ ಕಂಡು ಬಂದ ದೃಶ್ಯಗಳಲ್ಲಿ ಬೆಂಕಿ ಹೊತ್ತಿಕೊಂಡ ಬಸ್‌ಗಳ ಸುಟ್ಟ ಅವಶೇಷಗಳು ಕಂಡುಬಂದಿವೆ. ರಸ್ತೆಯಿಂದ ಅವರನ್ನು ತೆಗೆದುಹಾಕಲು ಕ್ರೇನ್ ಗಳನ್ನು ಕರೆಸಲಾಯಿತು.

ಸರ್ಕಾರಿ ವಾಹನಗಳಲ್ಲಿ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸಲಾಯಿತು ಎಂದು ಅಧಿಕಾರಿಗಳು ಹೇಳಿದರು. ರಸ್ತೆ ನಿರ್ಬಂಧಿಸಲ್ಪಟ್ಟಿರುವುದರಿಂದ, ಮಾರ್ಗ ಬದಲಾವಣೆಗಳನ್ನು ಮಾಡಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ನನ್ನ ಸಂತಾಪಗಳು.

ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಗಾಗಿ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.

ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮಂಜಿನಿಂದಾಗಿ ರಸ್ತೆ ಅಪಘಾತಗಳು ಹೆಚ್ಚಾಗಿವೆ. ಸೋಮವಾರ 31 ವಾಹನಗಳು ಸೇರಿದಂತೆ ಆರು ಅಪಘಾತಗಳು ಸಂಭವಿಸಿವೆ. ಭಾನುವಾರ 29 ವಾಹನಗಳು ಸೇರಿ ಆರು ಅಪಘಾತಗಳು ಸಂಭವಿಸಿದ್ದು, ಏಳು ಜನರು ಮೃತಪಟ್ಟಿದ್ದರು. ಶನಿವಾರ 40 ವಾಹನಗಳು ಸೇರಿದಂತೆ ಎಂಟು ಅಪಘಾತಗಳು ಸಂಭವಿಸಿ ನಾಲ್ವರು ಮೃತಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ. ಅಕ್ರಮ ಆಸ್ತಿ!

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ!

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ

SCROLL FOR NEXT