ಪೃಥ್ವಿರಾಜ್ ಚವಾಣ್  
ದೇಶ

'ಆಪರೇಷನ್ ಸಿಂಧೂರ್' ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು, ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು': ಪೃಥ್ವಿರಾಜ್ ಚವಾಣ್; Video

ಪುಣೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಳೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಪಾಕಿಸ್ತಾನ ಸೇನೆಯು ಹೊಡೆದುರುಳಿಸುವ ಸಾಧ್ಯತೆಯ ನಡುವೆ ಭಾರತೀಯ ವಾಯುಪಡೆಯು ಸಂಪೂರ್ಣವಾಗಿ ನೆಲಸಮವಾಯಿತು ಎಂದು ಚವಾಣ್ ಆಘಾತಕಾರಿ ಮತ್ತು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೊದಲ ದಿನದಂದು ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅವರು ವಿವಾದವನ್ನು ಹುಟ್ಟುಹಾಕಿದ್ದಾರೆ.

ಪುಣೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಳೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಪಾಕಿಸ್ತಾನ ಸೇನೆಯು ಹೊಡೆತಕ್ಕೆ ಭಾರತೀಯ ವಾಯುಪಡೆಯು ಸಂಪೂರ್ಣವಾಗಿ ನೆಲಸಮವಾಯಿತು ಎಂದು ಚವಾಣ್ ಆಘಾತಕಾರಿ ಮತ್ತು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

"ಆಪರೇಷನ್ ಸಿಂಧೂರ್‌ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. ಮೇ 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ, ಜನರು ಅದನ್ನು ಒಪ್ಪುತ್ತಾರೊ ಇಲ್ಲವೋ, ಆದರೆ ನಾವು ಸಂಪೂರ್ಣವಾಗಿ ಸೋತಿದ್ದೇವೆ. ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಯಿತು. ವಾಯುಪಡೆಯನ್ನು ಸಂಪೂರ್ಣವಾಗಿ ನೆಲಕಚ್ಚಿಸಲಾಯಿತು ಎಂದರು.

ಒಂದೇ ಒಂದು ವಿಮಾನವೂ ಹಾರಲಿಲ್ಲ. ಗ್ವಾಲಿಯರ್, ಬಟಿಂಡಾ ಅಥವಾ ಸಿರ್ಸಾದಿಂದ ಯಾವುದೇ ವಿಮಾನ ಹಾರಾಟ ನಡೆಸಿದ್ದರೆ, ಪಾಕಿಸ್ತಾನವು ಹೊಡೆದುರುಳಿಸುವ ಸಾಧ್ಯತೆ ಹೆಚ್ಚಾಗಿತ್ತು. ಅದಕ್ಕಾಗಿಯೇ ವಾಯುಪಡೆಯನ್ನು ಸಂಪೂರ್ಣವಾಗಿ ಗ್ರೌಂಡ್ ಮಾಡಲಾಯಿತು ಎಂದಿದ್ದಾರೆ ಪೃಥ್ವಿರಾಜ್ ಚೌಹಾಣ್.

ಭವಿಷ್ಯದ ಯುದ್ಧಗಳು ಆಕಾಶದಲ್ಲಿ ನಡೆಯುವಾಗ ಸೈನ್ಯವನ್ನು ನಿರ್ವಹಿಸುವ ಅಗತ್ಯವನ್ನು ಕೂಡ ಅವರು ಪ್ರಶ್ನಿಸಿದರು.

ಇತ್ತೀಚೆಗೆ, ಆಪರೇಷನ್ ಸಿಂದೂರ್ ಸಮಯದಲ್ಲಿ ನಾವು ನೋಡಿದ್ದೇವೆ, ಮಿಲಿಟರಿಯ ಒಂದು ಕಿಲೋಮೀಟರ್ ಚಲನೆಯೂ ಇರಲಿಲ್ಲ. ಎರಡು ಅಥವಾ ಮೂರು ದಿನಗಳಲ್ಲಿ ನಡೆದದ್ದೆಲ್ಲವೂ ವೈಮಾನಿಕ ಯುದ್ಧ ಮತ್ತು ಕ್ಷಿಪಣಿ ಯುದ್ಧವಾಗಿತ್ತು. ಭವಿಷ್ಯದಲ್ಲಿಯೂ ಸಹ, ಯುದ್ಧಗಳು ಅದೇ ರೀತಿಯಲ್ಲಿ ನಡೆಯುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ನಾವು ನಿಜವಾಗಿಯೂ 12 ಲಕ್ಷ ಸೈನಿಕರನ್ನು ನಿರ್ವಹಿಸುವ ಅಗತ್ಯವಿದೆಯೇ, ಅವರಿಂದ ಬೇರೆ ಏನಾದರೂ ಕೆಲಸ ಮಾಡಿಸಬಹುದೇ ಎಂದು ನೋಡಬೇಕಿದೆ ಎಂದರು.

ಸಹಜವಾಗಿ ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಅವರು ಕಾಂಗ್ರೆಸ್ ಭಾರತೀಯ ಸಶಸ್ತ್ರ ಪಡೆಗಳನ್ನು ದ್ವೇಷಿಸುತ್ತದೆ ಎಂದು ಹೇಳಿದರು.

ಭಾರತೀಯ ಸೇನೆಯನ್ನು ಅವಮಾನಿಸುವುದು ಕಾಂಗ್ರೆಸ್ ಗೆ ಚಟವಾಗಿ ಹೋಗಿದೆ. ಸಡಕ್ ಕಾ ಗುಂಡಾದಿಂದ ಆಪರೇಷನ್ ಸಿಂದೂರ್, ಸರ್ಜಿಕಲ್ ಸ್ಟ್ರೈಕ್, ಬಾಲಕೋಟ್ ಮತ್ತು ಓಪ್ ಮಹಾದೇವ್ ನ್ನು ಅನುಮಾನಿಸುವವರೆಗೆ ಎಂದು ಬಿಜೆಪಿ ನಾಯಕ ಶೆಹನಾಜ್ ಪೂನವಾಲಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಆಪರೇಷನ್ ಸಿಂದೂರ್ ಮೇ 2025 ರಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಪ್ರಮುಖ ಭಯೋತ್ಪಾದಕ ದಾಳಿಯವರೆಗೆ ಭಾರತದ ತ್ವರಿತ, ಗುರಿ ಮಿಲಿಟರಿ ಪ್ರತಿಕ್ರಿಯೆಯಾಗಿತ್ತು. ಇದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗಿನ ಭಯೋತ್ಪಾದಕ ಮೂಲಸೌಕರ್ಯ ಮತ್ತು ಲಾಂಚ್‌ಪ್ಯಾಡ್‌ಗಳನ್ನು ನಾಶಮಾಡುವ ಗುರಿಯನ್ನು ಹೊಂದಿತ್ತು.

ಆಪರೇಷನ್ ಸಿಂದೂರ್ ಅಡಿಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಬೆಳಗಿನ ಜಾವ ಕ್ಷಿಪಣಿ ದಾಳಿಗಳನ್ನು ನಡೆಸಿದವು. ಬಹಾವಲ್ಪುರದ ಜೈಶ್-ಎ-ಮೊಹಮ್ಮದ್ ಭದ್ರಕೋಟೆ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾದ ನೆಲೆಗಳನ್ನು ಧ್ವಂಸ ಮಾಡಲಾಗಿತ್ತು. ಏಪ್ರಿಲ್ 22 ರಂದು 26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆಯನ್ನು ಭಾರತ ಕೈಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇಶಾನ್, ಪಾಂಡ್ಯ ಅರ್ಧಶತಕ; ನಮೀಬಿಯಾಗೆ 210 ರನ್ ಗುರಿ ನೀಡಿದ ಭಾರತ! ಮಿಂಚಿದ ನಮೀಬಿಯಾ ನಾಯಕ Erasmus

Betting Case: MS ಧೋನಿಗೆ ಮದ್ರಾಸ್ ಹೈಕೋರ್ಟ್ ಶಾಕ್, 10 ಲಕ್ಷ ರೂ ಶುಲ್ಕ! ಕಾರಣ?

T20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್; ದಾಖಲೆಗಳ ಮಳೆ; ಎಲೈಟ್ ಗ್ರೂಪ್ ಸೇರಿದ Ishan Kishan!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

SCROLL FOR NEXT