ಲಾಂಬೋರ್ಘಿನಿ 
ದೇಶ

ಮುಂಬೈ: ಗಂಟೆಗೆ 252 ಕಿ.ಮೀ ವೇಗದಲ್ಲಿ ಕಾರು ಚಾಲನೆ; ಲಾಂಬೋರ್ಘಿನಿ ಜಪ್ತಿ, FIR ದಾಖಲು

ಡಿಸೆಂಬರ್ 12 ರಂದು ಈ ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕ ಕೃತ್ಯವನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಗಂಟೆಗೆ 252 ಕಿ.ಮೀ ವೇಗದಲ್ಲಿ ಲಾಂಬೋರ್ಘಿನಿ ಕಾರು ಚಾಲನೆ ಮಾಡಿದ ಚಾಲಕನ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಲಾಂಬೋರ್ಘಿನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಡಿಸೆಂಬರ್ 12 ರಂದು ಈ ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕ ಕೃತ್ಯವನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಚಾಲಕನನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

"ಐಷಾರಾಮಿ ಸ್ಪೋರ್ಟ್ಸ್ ಕಾರಿನೊಳಗೆ ಚಿತ್ರೀಕರಿಸಲಾದ ವಿಡಿಯೋದಲ್ಲಿ, ಸೀ ಲಿಂಕ್ ನ ದಕ್ಷಿಣ ತುದಿಯ ಕಡೆಗೆ ಹೋಗುವಾಗ, ಇತರ ವಾಹನಗಳನ್ನು ಹಿಂದಿಕ್ಕುವಾಗ ಲಾಂಬೋರ್ಘಿನಿ ಸ್ಪೀಡೋಮೀಟರ್ ಗಂಟೆಗೆ 252 ಕಿ.ಮೀ ವೇಗವನ್ನು ತಲುಪುತ್ತಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲಾಂಬೋರ್ಘಿನಿ ಸ್ಪೀಡೋಮೀಟರ್

ನಂತರ ಪೊಲೀಸ್ ಅಧಿಕಾರಿಗಳು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅದೇ ಕಾರು ಹಲವು ಬಾರಿ ವೇಗ ಮಿತಿಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಮತ್ತು ಅದರ ವಿರುದ್ಧ ಹಲವಾರು ಸಂಚಾರಿ ನಿಯಮ ಉಲ್ಲಂಘನೆ ಚಲನ್‌ಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸೀ ಲಿಂಕ್ ನಲ್ಲಿ ಕಾರುಗಳ ವೇಗ ಮಿತಿ ಗಂಟೆಗೆ 80 ಕಿ.ಮೀ ಆಗಿರುವುದರಿಂದ, ಈ ಸ್ಪೋರ್ಟ್ಸ್ ಕಾರಿನ ಚಾಲಕ ವೇಗ ಮಿತಿ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕ ರಸ್ತೆಗಳಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಕಾರು ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281 ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಮಧ್ಯ ಮುಂಬೈನ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

SCROLL FOR NEXT