ದತ್ತಾತ್ರೇಯ ಹೊಸಬಾಳೆ 
ದೇಶ

ಭಾರತದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ: RSS ನಾಯಕ ದತ್ತಾತ್ರೇಯ ಹೊಸಬಾಳೆ

ಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗೆ ಹೇಳಿದ ಮಾತ್ರಕ್ಕೆ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ.

ನವದೆಹಲಿ: ಹಿಂದೂ ಧರ್ಮ ಶ್ರೇಷ್ಠವಾದದ್ದು. ಭಾರತ ನೆಲದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು ಎಂದು ಹಿರಿಯ ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗೆ ಹೇಳಿದ ಮಾತ್ರಕ್ಕೆ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ. ನಮ್ಮ ಹಿಂದೂ ಧರ್ಮ ಸರ್ವೋಚ್ಛ. ಅದು ಎಲ್ಲರ ಪರವಾಗಿದೆ ಎಂದು ಹೊಸಬಾಳೆ ತಿಳಿಸಿದ್ದಾರೆ.

ಯೋಗಾಸನಗಳ ಅನುಕ್ರಮವಾದ ಸೂರ್ಯ ನಮಸ್ಕಾರವು ವೈಜ್ಞಾನಿಕ ಮತ್ತು ಆರೋಗ್ಯ ಆಧಾರಿತ ಅಭ್ಯಾಸ. ಇದರಿಂದ ಮುಸ್ಲಿಮರಿಗೆ ಏನು ಹಾನಿ? ಪ್ರಾರ್ಥನೆ ಮಾಡುವವರು ಪ್ರಾಣಾಯಾಮ ಮಾಡಿದರೆ ತಪ್ಪೇ? ಸೂರ್ಯ ನಮಸ್ಕಾರ ಮಾಡೋದಕ್ಕೆ ನಮಾಜ್‌ ಬಿಡಿ ಅಂತ ನಾವು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾನವ ಧರ್ಮಕ್ಕೆ ಆದ್ಯತೆ ನೀಡುವ ಮೂಲಕ ಯಾವುದೇ ನಂಬಿಕೆಯನ್ನು ಅನುಸರಿಸಲು ಜನರು ಸ್ವತಂತ್ರರು. ಹಿಂದೂ ತತ್ವಶಾಸ್ತ್ರವು ಎಲ್ಲಾ ಜೀವಿಗಳು ಮತ್ತು ಪ್ರಕೃತಿ ವಿಚಾರವಾಗಿ ಅಹಿಂಸೆಯನ್ನು ಬೋಧಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ