ಸಾಂದರ್ಭಿಕ ಚಿತ್ರ 
ದೇಶ

ಮೊಟ್ಟೆ ತಿಂದ್ರೆ ಕ್ಯಾನ್ಸರ್‌ ಬರುತ್ತಾ? ಕಡೆಗೂ ದೃಢೀಕರಣ ನೀಡಿದ FSSAI

ಮೊಟ್ಟೆಗಳಲ್ಲಿ ನೈಟ್ರೋ ಫ್ಯೂರಾನ್ ಮೆಟಾಬಾಲೈಟ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವರದಿಗಳು ವಿಶೇಷವಾಗಿ 'ನಾನ್ ವೆಜ್' ಪ್ರಿಯರಲ್ಲಿ ನಿರಾಸೆ ಉಂಟು ಮಾಡಿತ್ತು.

ನವದೆಹಲಿ: ಇತ್ತೀಚಿಗೆ ಪೌಷ್ಟಿಕಾಂಶಯುಕ್ತ 'ಮೊಟ್ಟೆ' ತಿಂದ್ರೆ ಕ್ಯಾನ್ಸರ್‌ ಬರುತ್ತದೆ ಎಂಬ ವರದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ, ಜನರಲ್ಲಿ ಆತಂಕ ಹುಟ್ಟಿಸಿತ್ತು.

ಮೊಟ್ಟೆಗಳಲ್ಲಿ ನೈಟ್ರೋ ಫ್ಯೂರಾನ್ ಮೆಟಾಬಾಲೈಟ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವರದಿಗಳು ವಿಶೇಷವಾಗಿ 'ನಾನ್ ವೆಜ್' ಪ್ರಿಯರಲ್ಲಿ ತೀವ್ರ ಭಯಭೀತಿಯನ್ನು ಉಂಟು ಮಾಡಿತ್ತು. ಕೆಲವರು ಮೊಟ್ಟೆಯ ಬಳಕೆಯನ್ನೇ ಸಂಪೂರ್ಣವಾಗಿ ನಿಲ್ಲಿಸುವ ಯೋಚನೆ ನಡೆಸಿದರು.

ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಮೊಟ್ಟೆ, ಸೇವನೆಗೆ ಸುರಕ್ಷಿತವಾಗಿದ್ದು, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಶನಿವಾರ ಹೇಳಿದೆ.

ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ಅಂಶಗಳಿವೆ ಎನ್ನುವ ವರದಿಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ ಎಂದು FSSAI ತಿಳಿಸಿದೆ.

ಇಂತಹ ವರದಿಗಳು ಜನರನ್ನು ತಪ್ಪುದಾರಿಗೆ ಎಳೆಯುವುದಲ್ಲದೆ, ಅನಗತ್ಯವಾಗಿ ಆತಂಕವನ್ನು ಸೃಷ್ಟಿ ಮಾಡಿದೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಕಾರ, ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯ ಎಲ್ಲ ಹಂತದಲ್ಲಿ ನೈಟ್ರೋ ಫ್ಯೂರಾನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಯಾವುದೇ ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯು ಮೊಟ್ಟೆ ಸೇವನೆಯು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಹೇಳಿಲ್ಲ ಎಂದು FSSAI ಸ್ಪಷ್ಪಪಡಿಸಿದೆ.

2011 ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳ ಅಡಿಯಲ್ಲಿ ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಫ್ಯೂರಾನ್‌ಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು FSSAI ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

SCROLL FOR NEXT