ರಾಹುಲ್ ಗಾಂಧಿ-ಒಮರ್ ಅಬ್ದುಲ್ಲಾ PTI
ದೇಶ

ವಿದೇಶಕ್ಕೆ ಹೋಗುವುದು ಅಪರಾಧವಲ್ಲ: ರಾಹುಲ್ ಗಾಂಧಿ ಜರ್ಮನಿ ಭೇಟಿಗೆ ಒಮರ್ ಅಬ್ದುಲ್ಲಾ ಬೆಂಬಲ

ವಿದೇಶ ಪ್ರವಾಸ ಮಾಡುವುದು ಅಥವಾ ವಿದೇಶಿ ಶಿಕ್ಷಣ ತಜ್ಞರು ಮತ್ತು ಸಂಸ್ಥೆಗಳೊಂದಿಗೆ ಸಂವಹನ ನಡೆಸುವುದು ಹೇಗೆ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗುತ್ತದೆ ಎಂದು ಪ್ರಶ್ನಿಸಿದರು.

ಶ್ರೀನಗರ: ದೇಶದ ಹೊರಗೆ "ಭಾರತ ವಿರೋಧಿ ಶಕ್ತಿಗಳನ್ನು" ಭೇಟಿಯಾದ ಆರೋಪಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶನಿವಾರ ಸಮರ್ಥಿಸಿಕೊಂಡಿದ್ದು, ವಿದೇಶಕ್ಕೆ ಹೋಗುವುದು ಅಪರಾಧವಲ್ಲ ಮತ್ತು ಪ್ರಧಾನಿಯೂ ಸಹ ಅದನ್ನು ಮಾಡುತ್ತಾರೆ ಎಂದು ಹೇಳಿದರು.

ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, ವಿದೇಶ ಪ್ರವಾಸ ಮಾಡುವುದು ಅಥವಾ ವಿದೇಶಿ ಶಿಕ್ಷಣ ತಜ್ಞರು ಮತ್ತು ಸಂಸ್ಥೆಗಳೊಂದಿಗೆ ಸಂವಹನ ನಡೆಸುವುದು ಹೇಗೆ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗುತ್ತದೆ ಎಂದು ಪ್ರಶ್ನಿಸಿದರು.

ಅಧಿಕಾರದಲ್ಲಿರುವವರಂತೆ ವಿರೋಧ ಪಕ್ಷದ ನಾಯಕರು ವಿದೇಶ ಪ್ರವಾಸ ಮಾಡಲು ಮತ್ತು ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಸ್ವತಂತ್ರರು ಮತ್ತು ಅಂತಹ ಸಂವಹನಗಳು ರಾಜಕೀಯ ಮತ್ತು ಸಾರ್ವಜನಿಕ ಜೀವನದ ಸಾಮಾನ್ಯ ಭಾಗವಾಗಿದೆ ಎಂದು ಅವರು ಹೇಳಿದರು.

ಇಂದು ಸಂಜೆ ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಶ್ಮೀರ ಸಿಎಂ, "ರಾಹುಲ್ ಗಾಂಧಿ ಭಾರತ ವಿರೋಧಿ ವ್ಯಕ್ತಿಯನ್ನು ಯಾವಾಗ ಭೇಟಿ ಮಾಡಿದ್ದಾರೆ? ವಿದೇಶಕ್ಕೆ ಹೋಗುವುದು ಅಪರಾಧವೇ? ಅವರು ಎಲ್ಲಿ ಬೇಕಾದರೂ ಹೋಗಿ(ಯಾರೊಂದಿಗೂ) ಮಾತನಾಡಲು ಸ್ವತಂತ್ರರು. ಎಲ್ಲರೂ ಅದನ್ನು ಮಾಡುತ್ತಾರೆ. ಪ್ರಧಾನಿ ಮೋದಿ ಸಹ ಅದನ್ನು ಮಾಡುತ್ತಾರೆ. ಎಲ್ಲಾ ಮಂತ್ರಿಗಳು ಅದನ್ನು ಮಾಡುತ್ತಾರೆ. ಇದಕ್ಕೆ ಬಿಜೆಪಿಯವರು ಏಕೆ ಆಕ್ಷೇಪಿಸಬೇಕು?" ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿಯವರು ಜರ್ಮನಿಗೆ ಭೇಟಿ ನೀಡಿದ ಸಂದರ್ಭದಲ್ಲಿ "ಭಾರತದ ಶತ್ರುಗಳನ್ನು" ಭೇಟಿ ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರ ಹೇಳಿಕೆಗಳಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾಟಿಯಾ, ಬರ್ಲಿನ್ ಮೂಲದ ಹರ್ಟೀ ಶಾಲೆಯ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕ ಕಾರ್ನೆಲಿಯಾ ವೋಲ್ ಅವರೊಂದಿಗೆ ರಾಹುಲ್ ಗಾಂಧಿಯವರ ಫೋಟೋ ಪ್ರದರ್ಶಿಸಿದರು ಮತ್ತು ಕಾಂಗ್ರೆಸ್ ನಾಯಕ "ಜರ್ಮನಿಯಲ್ಲಿ ಭಾರತ ವಿರೋಧಿ ಶಕ್ತಿಗಳನ್ನು" ಭೇಟಿಯಾಗಿರುವುದಕ್ಕೆ ಇದು "ಪುರಾವೆ" ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

SCROLL FOR NEXT