ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಯೋಧನ ಬಂಧನ

ಗುರುವಾರ ಸಂಜೆ 5.30ರ ಸುಮಾರಿಗೆ ತತಿಸಿಲ್ವಾಯಿ ರೈಲು ನಿಲ್ದಾಣದಲ್ಲಿ ಮಹಿಳೆ ಚಿಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ರಾಂಚಿ: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ರಾಂಚಿಯಲ್ಲಿ ಯೋಧನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗುರುವಾರ ಸಂಜೆ 5.30ರ ಸುಮಾರಿಗೆ ತತಿಸಿಲ್ವಾಯಿ ರೈಲು ನಿಲ್ದಾಣದಲ್ಲಿ ಮಹಿಳೆ ರಾಂಚಿಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

42 ವರ್ಷದ ಯೋಧ ಮಹಿಳೆಯನ್ನು ರೈಲಿನ ಖಾಲಿ ಕೋಚ್‌ಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

'ಸೇನಾ ಸಿಬ್ಬಂದಿ ರಕ್ಷಣಾ ಲಾಜಿಸ್ಟಿಕ್ಸ್ ರೈಲಿನ ಕಾವಲು ಕರ್ತವ್ಯದಲ್ಲಿದ್ದರು. ಅಪರಾಧ ಮಾಡಿದಾಗ ಅವರು ಕುಡಿದ ಮತ್ತಿನಲ್ಲಿದ್ದರು ಎಂದು ವರದಿಯಾಗಿದೆ' ಎಂದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ಜವಾನ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಸರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದು, ಪಂಜಾಬ್‌ನ ಪಟಿಯಾಲದಲ್ಲಿರುವ 42 ಮೀಡಿಯಂ ರೆಜಿಮೆಂಟ್‌ನಲ್ಲಿ ನಿಯೋಜಿಸಲಾಗಿತ್ತು ಎಂದು ಅವರು ಹೇಳಿದರು.

ಸಹಾಯಕ್ಕಾಗಿ ಆಕೆಯ ಕೂಗು ಕೇಳಿದ ನಂತರ, ರೈಲ್ವೆ ನಿಲ್ದಾಣದಲ್ಲಿ ಜನರು ಜಮಾಯಿಸಿದ್ದಾರೆ. ಬಳಿಕ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಜವಾನ ಪರಾರಿಯಾಗಲು ಯತ್ನಿಸಿ, ಗಾಯಗೊಂಡಿದ್ದಾನೆ. ಆದರೂ, ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಶುಕ್ರವಾರ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಸೆಂಟ್ರಲ್ ಏಜೆನ್ಸಿಗಳ ಒತ್ತಡದಿಂದ NCP ತೊರೆದಿದ್ದ ಅಜಿತ್ ಪವಾರ್, ಮತ್ತೆ ಎರಡು ಬಣಗಳ ವಿಲೀನ ಬಯಸಿದ್ದರು: NCP SP ನಾಯಕ

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

ವಿಜಯ್ ಗೆ ಜನರಿಗೆ ಸಹಾಯ ಮಾಡುವ ಉದ್ದೇಶ ಇಲ್ಲ; ಸಿಂಪಲ್ ಆಗಿ ಸಿಎಂ ಆಗುವ ಬಯಕೆ: ಡಿಎಂಕೆ ತಿರುಗೇಟು

SCROLL FOR NEXT