ಸಾಂದರ್ಭಿಕ ಚಿತ್ರ 
ದೇಶ

ಗಂಡ-ಹೆಂಡತಿ ಜಗಳಕ್ಕೆ ಮಗು ಬಲಿ; ಕುಡಿದ ಮತ್ತಿನಲ್ಲಿ 4 ವರ್ಷದ ಪುತ್ರನನ್ನೇ ಕೊಂದ ಪಾಪಿ ಅಪ್ಪ!

ಉತ್ತರ ಪ್ರದೇಶದ ಭದೋಹಿಯ ಸೂರಿಯಾವಾನ್ ಪ್ರದೇಶದ ಗುವಾಲಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಭದೋಹಿ: ಪತ್ನಿಯೊಂದಿಗೆ ಜಗಳವಾಡಿದ ನಂತರ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗನನ್ನು ಪದೇ ಪದೇ ನೆಲಕ್ಕೆ ಬಡಿದು ಕೊಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಭದೋಹಿಯ ಸೂರಿಯಾವಾನ್ ಪ್ರದೇಶದ ಗುವಾಲಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಆರೋಪಿಯನ್ನು ರಾಮ್ಜಿ ವನವಾಸಿ ಎಂದು ಗುರುತಿಸಲಾಗಿದ್ದು, ಶನಿವಾರ ಮಧ್ಯರಾತ್ರಿ ಮನೆಗೆ ಮರಳಿದಾಗ ಕುಡಿದ ಮತ್ತಿನಲ್ಲಿ ಮಗನನ್ನೇ ಕೊಲೆ ಮಾಡಿದ್ದಾನೆ ಎಂದು ಠಾಣಾಧಿಕಾರಿ ಮೊಹಮ್ಮದ್ ಶಕೀಲ್ ಖಾನ್ ಅವರು ತಿಳಿಸಿದ್ದಾರೆ.

ಪತ್ನಿಯೊಂದಿಗೆ ಜಗಳವಾಡಿದ್ದ ಆರೋಪಿ, ನಂತರ ಪತ್ನಿ ಮೇಲಿನ ಕೊಪಕ್ಕೆ ಮಲಗಿದ್ದ ತನ್ನ 4 ವರ್ಷದ ಮಗ ವಿಕಾಸ್‌ನನ್ನು ಎತ್ತಿಕೊಂಡು ಹಲವು ಬಾರಿ ನೆಲಕ್ಕೆ ಬಡಿದು ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕುಟುಂಬ ಸದಸ್ಯರು ಗಾಯಗೊಂಡಿದ್ದ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನಿಸಿದರು. ಆದರೆ ಗಂಭೀರ ಗಾಯಗಳಿದ್ದ ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಭಾನುವಾರ ಮಧ್ಯಾಹ್ನ, ಮಗುವಿನ ಅಜ್ಜಿ ಪ್ರಭಾವತಿ ದೇವಿ ದೂರು ದಾಖಲಿಸಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ.ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲೆಸ್ಕೋಪ್ ಪತ್ತೆ, ಭದ್ರತೆ ಹೆಚ್ಚಳ

ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್‌ ಬಂಧನ

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: Air India Expressನಿಂದ ಪೈಲಟ್‌ಗೆ ನೋಟಿಸ್

SCROLL FOR NEXT