ಪಿ ಚಿದಂಬರಂ 
ದೇಶ

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ

ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಯನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿದ್ದು, ಇಂದು ರಾಷ್ಟ್ರಪತಿಗಳು ಅದಕ್ಕೆ ಅಂಕಿತ ಹಾಕಿದ್ದಾರೆ.

ಚೆನ್ನೈ: ಎಂಜಿಎನ್‌ಆರ್‌ಇಜಿಎಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಬಿಜೆಪಿಯವರು "ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಹತ್ಯೆ ಮಾಡಿದ್ದಾರೆ" ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಭಾನುವಾರ ಕಿಡಿ ಕಾರಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ನ ಗಾಂಧಿ ಹೆಸರು ತೆಗೆದು ಹಾಕುವ ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಯನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿದ್ದು, ಇಂದು ರಾಷ್ಟ್ರಪತಿಗಳು ಅದಕ್ಕೆ ಅಂಕಿತ ಹಾಕಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಚಿದಂಬರಂ ಅವರು, "ನಮ್ಮ ಪಕ್ಷವು ಮನೆ ಮನೆ, ಹಳ್ಳಿ ಹಳ್ಳಿಗೆ ತೆರಳಿ ಈ ವಂಚನೆಯನ್ನು ಬಹಿರಂಗಪಡಿಸುತ್ತದೆ ಮತ್ತು ಈ ಕಾಯ್ದೆಯನ್ನು ರದ್ದುಗೊಳಿಸುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ" ಎಂದು ಹೇಳಿದರು.

"ನನ್ನ ಪ್ರಕಾರ, ಇದು ಮಹಾತ್ಮ ಗಾಂಧಿಯವರ ಎರಡನೇ ಹತ್ಯೆ. ಜನವರಿ 30, 1948 ರಂದು ಅವರನ್ನು ಒಮ್ಮೆ ಕೊಲ್ಲಲಾಯಿತು. ಈಗ ಅವರನ್ನು ಮತ್ತೆ ಕೊಂದಿದ್ದಾರೆ - ಅವರ ಸ್ಮರಣೆಯನ್ನು ಮತ್ತೆ ಕೊಂದಿದ್ದಾರೆ" ಎಂದು ಮಾಜಿ ಕೇಂದ್ರ ಹಣಕಾಸು ಸಚಿವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

"ನೀವು ಗಾಂಧಿ ಮತ್ತು ನೆಹರೂ ಅವರನ್ನು ಅಧಿಕೃತ ದಾಖಲೆಗಳಿಂದ ಅಳಿಸಿಹಾಕಲು ಪ್ರಯತ್ನಿಸಬಹುದು. ಆದರೆ ಅವರು ಬುದ್ಧ ಅಥವಾ ಯೇಸುವಿನಂತೆ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ. ಯಾವುದೇ ಸರ್ಕಾರಿ ಆದೇಶವು ಅವರನ್ನು ಅಳಿಸಿಹಾಕಲು ಸಾಧ್ಯವಿಲ್ಲ" ಎಂದರು.

ಹೊಸ ಯೋಜನೆಗಳ ಹೆಸರನ್ನು "ಇಂಗ್ಲಿಷ್ ಅಕ್ಷರಗಳಲ್ಲಿ ಬರೆದ ಹಿಂದಿ ಪದಗಳು" ಎಂದು ಕರೆಯುವ ಸರ್ಕಾರದ ನಿರ್ಧಾರವನ್ನು ಹಿರಿಯ ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ. "ವಿಕ್ಷಿತ್ ಭಾರತ್ ಜಿ ರಾಮ್ ಜಿ" ನಂತಹ ಹೆಸರುಗಳು ದಕ್ಷಿಣ ಭಾರತೀಯರಿಗೆ ಗೊಂದಲಮಯ ಮತ್ತು ಅರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

U19 ಏಷ್ಯಾ ಕಪ್ ಫೈನಲ್‌: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳ

ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್‌ ಬಂಧನ

SCROLL FOR NEXT