ಮಮತಾ ಬ್ಯಾನರ್ಜಿ - ಹುಮಾಯೂನ್ ಕಬೀರ್ 
ದೇಶ

ಟಿಎಂಸಿಯಿಂದ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ; ಅಲ್ಪಸಂಖ್ಯಾತರು ಒಗ್ಗಟ್ಟಾಗುವಂತೆ ಮಮತಾ ಮನವಿ

ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವಾಗ ಹೊಸ ಪಕ್ಷ ಘೋಷಿಸಿದ್ದು, ಇದು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸುವ ಸಾಧ್ಯತೆ ಇದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಸಾಂಪ್ರದಾಯಿಕವಾಗಿ ಬೆಂಬಲಿಸುವ ಅಲ್ಪಸಂಖ್ಯಾತರು ಒಗ್ಗಟ್ಟಿನಿಂದ ಇರಬೇಕೆಂದು ಮನವಿ ಮಾಡಿದ್ದಾರೆ.

ಇತ್ತೀಚಿಗೆ ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವಾಗ ಹೊಸ ಪಕ್ಷ ಘೋಷಿಸಿದ್ದು, ಇದು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸುವ ಸಾಧ್ಯತೆ ಇದೆ.

ಇಂದು ನಗರದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟ್‌ಗಳ(ಬಿಎಲ್‌ಎ) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಅಲ್ಪಸಂಖ್ಯಾತರು ಭಯಭೀತರಾಗದಂತೆ ಮನವಿ ಮಾಡಿದರು ಮತ್ತು ಬಿಜೆಪಿ ವಿರುದ್ಧ ನಿರ್ಧಾರ ತೆಗೆದುಕೊಂಡು ಎಲ್ಲರೂ ಒಗ್ಗಟ್ಟಾಗಬೇಕು" ಎಂದು ಮನವಿ ಮಾಡಿದರು.

"ಬಿಜೆಪಿ ನಿಮ್ಮ ನಡುವೆ ವಿಭಜನೆಯ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ. ಆದರೆ ನೀವು ಅವರ ವಿರುದ್ಧ ಒಗ್ಗಟ್ಟಾಗಿರಬೇಕು" ಎಂದು ಮುಖ್ಯಮಂತ್ರಿ ಹೇಳಿದರು.

ಭರತ್‌ಪುರದ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಇತ್ತೀಚೆಗೆ ಪಕ್ಷದಿಂದ ಅಮಾನತುಗೊಳಿಸಿದೆ. ಇದರಲ್ಲಿ ಕೋಮು ಹೇಳಿಕೆ ಮತ್ತು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯ ಮಾದರಿಯಲ್ಲಿ ಮಸೀದಿಯ ನಿರ್ಮಾಣವೂೂ ಸೇರಿದೆ.

ಈ ಮಧ್ಯೆ ಕಬೀರ್ ಅವರು ಇಂದು ತಮ್ಮ ಹೊಸ ಪಕ್ಷ ಜನತಾರ್ ಉನ್ಯನ್ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಲ್ದಂಗಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಬೀರ್, 2026 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸಲಿರುವ ಎಂಟು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರ ಮತ್ತು ಬೆಲ್ದಂಗಾ ಎಂಬ ಎರಡು ಸ್ಥಾನಗಳಿಂದ ತಾವು ಸ್ಪರ್ಧಿಸುವುದಾಗಿ ಮತ್ತು ಶೀಘ್ರದಲ್ಲೇ ಇತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

T20 World Cup 2026: ಹ್ಯಾಂಡ್ ಶೇಕ್ ವಿವಾದ, ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆ

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

T20 World Cup 2026: ಭಾರತ ವಿರುದ್ಧದ ಪಂದ್ಯ, ಪಾಕಿಸ್ತಾನಕ್ಕೆ 'ಮಾನಸಿಕ ಗೆಲುವು' ಎಂದ ಮಾಜಿ ನಾಯಕ! ಏನಿದು ವಿಚಿತ್ರ ಹೇಳಿಕೆ?

IND vs Pak ಪುರುಷರ T20 World Cup ಪಂದ್ಯಕ್ಕೆ ಮುನ್ನ ಪಾಕ್ ಮಹಿಳಾ ತಂಡವನ್ನು 61 ಎಸೆತದಲ್ಲೇ ಸೋಲಿಸಿದ ಭಾರತ!

SCROLL FOR NEXT