ಸಾಂದರ್ಭಿಕ ಚಿತ್ರ 
ದೇಶ

ಹೌರಾ: ಮಧ್ಯರಾತ್ರಿ ಹೊತ್ತಿ ಉರಿದ ಮನೆ; ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಹೌರಾದ ಜಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹೌರಾದ ಜಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ

ಮೃತರನ್ನು ದುರ್ಜೋಧನ್ ದೋಲುಯಿ(72), ಅವರ ಮಗ ದುಧ್‌ಕುಮಾರ್ ದೋಲುಯಿ(45), ಸೊಸೆ ಶಿಬಾನಿ ದೋಲುಯಿ(40) ಮತ್ತು ಮೊಮ್ಮಗಳು ಶಂಪಾ ದೋಲುಯಿ(15) ಎಂದು ಗುರುತಿಸಲಾಗಿದೆ.

ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ನಾಲ್ವರ ಶವಗಳನ್ನು ಮನೆಯಿಂದ ಹೊರತೆಗೆದಿದ್ದಾರೆ.

ಅವರ ಹುಲ್ಲಿನ ಮನೆಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಆಗಮಿಸಿದ್ದು, ಸುಮಾರು ಒಂದು ಗಂಟೆಯ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

"ಮರಣೋತ್ತರ ಪರೀಕ್ಷೆಗಾಗಿ ಉಲುಬೇರಿಯಾದ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಟುಂಬವು ತುಂಬಾ ಬಡವರೆಂದು ಸ್ಥಳೀಯರು ತಿಳಿಸಿದ್ದಾರೆ. ದುಧ್‌ಕುಮಾರ್‌ಗೆ ರಾಜ್ಯದ ಹೊರಗೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುವ ಒಬ್ಬ ಮಗನೂ ಇದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup 2026: ಇಶಾನ್ ಕಿಶಾನ್ ಅಬ್ಬರ, 'ಸ್ಪಿನ್ ಮೋಡಿಗೆ ಪಾಕ್ ತತ್ತರ, 61 ರನ್ ಅಂತರದಿಂದ ಗೆದ್ದು ಬೀಗಿದ ಭಾರತ!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ, ದೇಶಾದ್ಯಂತ ಸಂಭ್ರಮ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT