ಉದ್ಧವ್ ಠಾಕ್ರೆ - ರಾಜ್ ಠಾಕ್ರೆ  online desk
ದೇಶ

20 ವರ್ಷಗಳ ನಂತರ ಬಿಎಂಸಿ ಚುನಾವಣೆಗಾಗಿ ಒಂದಾದ ಠಾಕ್ರೆ ಸಹೋದರರು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಎಚ್ಚೆತ್ತ ಶಿವಸೇನೆ(ಯುಬಿಟಿ), ಬಿಎಂಸಿ ಮತ್ತು ಇತರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಉದ್ದವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಸಹೋದರರು ಒಂದಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ.

ಮುಂಬೈ: ಬರೋಬ್ಬರಿ 20 ವರ್ಷಗಳ ನಂತರ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮುಂದಿನ ವರ್ಷ ಜನವರಿ 15 ರಂದು ನಡೆಯಲಿರುವ ಏಷ್ಯಾದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಾಗಲು ನಿರ್ಧರಿಸಿದ್ದಾರೆ.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಎಚ್ಚೆತ್ತ ಶಿವಸೇನೆ(ಯುಬಿಟಿ), ಬಿಎಂಸಿ ಮತ್ತು ಇತರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಉದ್ದವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಸಹೋದರರು ಒಂದಾಗಿ ಚುನಾವಣೆ ಎದುರಿಸುವ ಬಗ್ಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಅಧಿಕೃತ ಘೋಷಣೆ ಮಾಡಲಾಗುತ್ತಿದೆ.

ಠಾಕ್ರೆ ಸಹೋದರರು ಕೈಜೋಡಿಸುವ ಬಗ್ಗೆ ನಾಳೆ ಮುಂಬೈನ ಹೋಟೆಲ್ ಬ್ಲೂ ಸೀನಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ಮತ್ತು ಎಂಎನ್ ಎಸ್ ಮೈತ್ರಿ ಬಗ್ಗೆ ಅಧಿಕೃತ ಘೋಷಣೆ ಮಾಡಿದ ನಂತರ, ರಾಜ್ ಮತ್ತು ಉದ್ಧವ್ ಠಾಕ್ರೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ ಹಾಗೂ ಒಟ್ಟಿಗೆ ಸೇರುವ ನಿರ್ಧಾರದ ಹಿಂದಿನ ಕಾರಣಗಳನ್ನು ವಿವರಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ(ಯುಬಿಟಿ) 150 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಎಂಸಿಯ ಒಟ್ಟು 227 ರಲ್ಲಿ ಉಳಿದ 77 ಸ್ಥಾನಗಳಲ್ಲಿ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ.

"ಸೀಟು ಹಂಚಿಕೆ ಮಾತುಕತೆಯಲ್ಲಿ, 150 ಕ್ಕೂ ಹೆಚ್ಚು ಸ್ಥಾನಗಳ ಕುರಿತು ಮಾತುಕತೆ ಪೂರ್ಣಗೊಂಡಿವೆ. ಆದರೆ ಸುಮಾರು 70 ಸ್ಥಾನಗಳನ್ನು ಇನ್ನೂ ಇತ್ಯರ್ಥಪಡಿಸಬೇಕಾಗಿದೆ. ಕೆಲವು ಸ್ಥಾನಗಳ ಬಗ್ಗೆ ವಿವಾದವಿತ್ತು, ಹೆಚ್ಚಾಗಿ ಮರಾಠಿ ಪ್ರಾಬಲ್ಯವಿರುವ ದಾದರ್, ಮಾಹಿಮ್ ಮತ್ತು ಪರೇಲ್ ಪ್ರದೇಶಗಳಿಂದ, ಎರಡೂ ಪಕ್ಷಗಳು ಹಕ್ಕು ಮಂಡಿಸಿವೆ. ಆದಾಗ್ಯೂ, ಮುಂದಿನ ಕೆಲವು ದಿನಗಳಲ್ಲಿ ಸೀಟು ಹಂಚಿಕೆ ಸಮಸ್ಯೆ ಪರಿಹರಿಸಲಾಗುವುದು" ಎಂದು ಉದ್ಧವ್ ಠಾಕ್ರೆ ಅವರ ಆಪ್ತ ಮೂಲಗಳು ತಿಳಿಸಿವೆ.

ಕಳೆದ ವಾರ ನಡೆದಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆಯ ಯುಬಿಟಿ ಬಣ, ಹೀನಾಯ ಪ್ರದರ್ಶನವನ್ನು ನೀಡಿತ್ತು. ಈ ಹಿನ್ನಲೆಯಲ್ಲಿ, ಯಾವುದೇ ತಡ ಮಾಡದೇ, ಮೈತ್ರಿಯ ಅಧಿಕೃತ ಘೋಷಣೆಯನ್ನು ನಾಳೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

Dhurandhar 2 ಬಾಕ್ಸ್ ಆಫೀಸ್ ಆರ್ಭಟಕ್ಕೆ ಬೆದರಿದ 'ಭೂತ್ ಬಂಗ್ಲಾ'; ಬಿಡುಗಡೆ ಏಪ್ರಿಲ್ 16ಕ್ಕೆ ಮುಂದೂಡಿಕೆ

Namma Metro: ಏ.5 ರಂದು ಈ ಮಾರ್ಗದಲ್ಲಿ ಮೆಟ್ರೋ ರೈಲು ಎರಡು ಗಂಟೆ ಸ್ಥಗಿತ! ಸಂಜೆ ಸೇವಾವಧಿ ವಿಸ್ತರಣೆ

ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ

RDPR ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಆಹ್ವಾನ; ವೇತನ, ಅರ್ಜಿ ಸಲ್ಲಿಕೆ ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

SCROLL FOR NEXT