ಪೊಲೀಸರು 
ದೇಶ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಪ್ರತಿಭಟನೆ; ಭುಗಿಲೆದ್ದ ಹಿಂಸಾಚಾರ

ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾದ ಹೌರಾ ಸೇತುವೆ ತಲುಪದಂತೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಹೌರಾ ನಿಲ್ದಾಣದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆ ಮತ್ತು ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಬುಧವಾರ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ ಎಂದು ವರದಿಯಾಗಿದೆ.

ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾದ ಹೌರಾ ಸೇತುವೆ ತಲುಪದಂತೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಹೌರಾ ನಿಲ್ದಾಣದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಬಾಂಗ್ಲಾದೇಶದ ಮೈಮೆನ್ಸಿಂಗ್ ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು ಮತ್ತು ಹೌರಾ ಸೇತುವೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದರು.

"ಪ್ರತಿಭಟನೆಯ ಹೆಸರಿನಲ್ಲಿ ಸಾಮಾನ್ಯ ಜನಜೀವನಕ್ಕೆ ಅಡ್ಡಿಪಡಿಸಲು ಮತ್ತು ಪ್ರಯಾಣಿಕರಿಗೆ ತೊಂದರೆ ಉಂಟುಮಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ತೊಂದರೆ ಸೃಷ್ಟಿಸುವ ಯಾವುದೇ ಪ್ರಯತ್ನಗಳನ್ನು ತಡೆಯಲು ನಾವು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತೇವೆ" ಎಂದು ಹೌರಾ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೊಲೀಸರು, ಪ್ರತಿಭಟನಾ ಮೆರವಣಿಗೆಯನ್ನು ಮುಂದುವರಿಸದಂತೆ ತಡೆದಾಗ, ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಬ್ಯಾರಿಕೇಡ್‌ಗಳನ್ನು ಭೇದಿಸಲು ಪ್ರಯತ್ನಿಸಿದರು, ಇದು ಘರ್ಷಣೆಗೆ ಕಾರಣವಾಯಿತು.

ಆ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು, ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತಿದ್ದಾಗ ಘೋಷಣೆಗಳನ್ನು ಕೂಗುತ್ತಿದ್ದಂತೆ, ಪೊಲೀಸರು ಅವರನ್ನು ಚದುರಿಸಲು ಮುಂದಾದರು. ಪ್ರತಿಭಟನಾಕಾರರು ಆಕ್ರಮಣಕಾರಿಯಾಗಿ ವರ್ತಿಸಿದರು. ಹೀಗಾಗಿ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ಚದುರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ಭಾರತ-ಬಾಂಗ್ಲಾದೇಶ ಗಡಿ ಮತ್ತು ಉತ್ತರ 24 ಪರಗಣ ಜಿಲ್ಲೆಯ ಪೆಟ್ರಾಪೋಲ್ ಅಥವಾ ಘೋಜದಂಗಾ ಗಡಿಗಳಲ್ಲಿ ಹಿಂದೂಪರ ಸಂಘಟನೆಗಳ ವಿವಿಧ ಗುಂಪುಗಳು ರಫ್ತು ಮತ್ತು ಆಮದು ವಸ್ತುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆದು ಪ್ರತಿಭಟಿಸಿದರು. ಇದು ಅಶಾಂತಿಗೆ ಕಾರಣವಾಯಿತು ಎಂದು ವರದಿಯಾಗಿದೆ.

ಡಿಸೆಂಬರ್ 18 ರಂದು, ಬಾಂಗ್ಲಾದೇಶದ ಮೈಮೆನ್ಸಿಂಗ್‌ ಜಿಲ್ಲೆಯ ಬಲುಕಾದಲ್ಲಿ 25 ವರ್ಷದ ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ ದಾಸ್ ಅವರನ್ನು ದೇವದೂಷಣೆಯ ಆರೋಪದ ಮೇಲೆ ಉದ್ರಿಕ್ತ ಗುಂಪೊಂದು ಹೊಡೆದು ಕೊಂದಿತ್ತು. ಅಲ್ಲದೇ ಆತನ ಮೃತದೇಹವನ್ನು ವಿವಸ್ತ್ರಗೊಳಿಸಿ ಮರಕ್ಕೆ ನೇಣು ಹಾಕಿ ಬೆಂಕಿ ಹಚ್ಚಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

ಟಿ20 ವಿಶ್ವಕಪ್ 2026: ಕೇವಲ 10 ಎಸೆತಗಳಲ್ಲಿ 5 ವಿಕೆಟ್ ಪತನ, USAಗೆ 191 ರನ್ ಗುರಿ ನೀಡಿದ ಪಾಕಿಸ್ತಾನ!

ಟಿ20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ

ಜಾಗತಿಕ ಭ್ರಷ್ಟಾಚಾರ ಸೂಚ್ಯಂಕ: ಭಾರತಕ್ಕೆ ಎಷ್ಟನೇ ಸ್ಥಾನ? ಅತ್ಯಂತ ಭ್ರಷ್ಟ ದೇಶ ಯಾವುದು?

SCROLL FOR NEXT