ಸಿಎಂ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ: ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ನಂಟು; ಸಿಎಂ ಪಿಣರಾಯಿ ಗಂಭೀರ ಆರೋಪ

ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್‌ ಪೊಟ್ಟಿ, ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಮತ್ತು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಂಟಿದೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪಿಣರಾಯಿ ಅವರು, ಕೇರಳದ ಮಾಜಿ ಸಿಎಂ ಕರುಣಾಕರನ್‌, ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೋನಿಯಾ ಗಾಂಧಿ ಅಪಾಯಿಂಟ್ಮೆಂಟ್‌ ಸಿಕ್ಕಿರಲಿಲ್ಲ. ಆದರೆ ಉನ್ನಿಕೃಷ್ಣನ್‌ ಪೊಟ್ಟಿಗೆ ಅಪಾಯಿಂಟ್ಮೆಂಟ್‌ ಸಿಕ್ಕಿದೆಯೇ? ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್‌ ಪೊಟ್ಟಿ, ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ ನಾಯಕರಿಗೂ ಗೊತ್ತು ಅವರ ಭೇಟಿ ಎಷ್ಟು ಕಷ್ಟ ಎನ್ನುವುದು. ಹಾಗಿದ್ದರೆ ಆರೋಪಿಗೆ ಹೇಗೆ ಸಿಕ್ಕಿತು ಅವರ ಭೇಟಿ ಅವಕಾಶ?’ ಎಂದು ಪ್ರಶ್ನಿಸಿದ್ದಾರೆ.

ಈ ಮೂಲಕ ಶಬರಿಮಲೆ ಚಿನ್ನದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್‌ ಮತ್ತು ಯುಡಿಎಫ್‌ಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ.ಪರಿಹಾರ: ಸಿದ್ದರಾಮಯ್ಯ, ಐವರ ಮೃತದೇಹ ಗುರುತು ಪತ್ತೆ

'ಎದುರಿನಿಂದ ಅತಿ ವೇಗದಲ್ಲಿ ಟ್ರಕ್ ಬರುವುದು ಕಂಡಿತು', ಅಪಘಾತ ಬಗ್ಗೆ ಬಸ್ ಚಾಲಕ ಪ್ರತಿಕ್ರಿಯೆ

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​: 11ಕ್ಕೂ ಹೆಚ್ಚು ಮಂದಿ ಸಜೀವ ದಹನ; ಹಲವರಿಗೆ ಗಂಭೀರ ಗಾಯ, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

New Year 2026 : ಅಸ್ಥಿರ ಸಮಯದಲ್ಲಿ ಬೇಕಾದದ್ದು ಸ್ಥಿರ ಆಲೋಚನೆ! (ಹಣಕ್ಲಾಸು)

SCROLL FOR NEXT