ಬಜರಂಗದಳದ ಪ್ರತಿಭಟನೆ 
ದೇಶ

'ಹಿಂದೂ ಭಾವನೆ'ಗಳಿಗೆ ಧಕ್ಕೆ: ಚರ್ಚ್‌ ಹೊರಗೆ ಬಜರಂಗದಳ ಪ್ರತಿಭಟನೆ, ಹನುಮಾನ್ ಚಾಲೀಸಾ ಪಠಣ! Video

ಚರ್ಚ್‌ನ ಮುಖ್ಯ ದ್ವಾರದ ಬಳಿ ಕುಳಿತ ಪ್ರತಿಭಟನಾಕಾರರು ಜೈ ಶ್ರೀ ರಾಮ್' ಮತ್ತು 'ಹರ್ ಹರ್ ಮಹಾದೇವ್' ಎಂದು ಘೋಷಣೆಗಳನ್ನು ಕೂಗಿದರು.

ಬರೇಲಿ: ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂ ಧರ್ಮ ಮತ್ತು ಸಮಾಜವನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಬಜರಂಗದಳದ ಸದಸ್ಯರು ರಾಯ್ ಬರೇಲಿಯ ಸೇಂಟ್ ಅಲ್ಫೋನ್ಸ್ ಕ್ಯಾಥೆಡ್ರಲ್ ಚರ್ಚ್‌ನ ಹೊರಗೆ ಪ್ರತಿಭಟನೆ ನಡೆಸಿ ‘ಹನುಮಾನ್ ಚಾಲೀಸಾ’ ಪಠಿಸಿದರು.

ಚರ್ಚ್‌ನ ಮುಖ್ಯ ದ್ವಾರದ ಬಳಿ ಕುಳಿತ ಪ್ರತಿಭಟನಾಕಾರರು ಜೈ ಶ್ರೀ ರಾಮ್' ಮತ್ತು 'ಹರ್ ಹರ್ ಮಹಾದೇವ್' ಎಂದು ಘೋಷಣೆಗಳನ್ನು ಕೂಗಿದರು. ಕ್ರಿಸ್ಮಸ್ ಹಬ್ಬವು ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅವರು ಆರೋಪಿಸಿದರು.

ಅಲ್ಲದೇ, ಪ್ರತಿಭಟನೆಯ ಸಮಯದಲ್ಲಿ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ಧಾವಿಸಿದರು.

ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಜರಂಗದಳ ಕಾರ್ಯಕರ್ತರು ನಗರ ಸರ್ಕಲ್ ಇನ್ಸ್ ಪೆಕ್ಟರ್ ಅಶುತೋಷ್ ಶಿವಂ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ 'ಸುಪ್ರೀಂ' ಶಾಕ್

ಮೆಟ್ರೋ ಪ್ರಯಾಣ ದರ ಏರಿಕೆ ತಡೆದಿದ್ದು ನಾವೇ, ಕೇಂದ್ರ ಸರ್ಕಾರದ ಪಾತ್ರ ಇಲ್ಲ: DCM DK Shivakumar

ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ

ಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಾಲಿವುಡ್ ಗಾಯಕ ಸೋನು ನಿಗಮ್

SCROLL FOR NEXT