ವಿ ವಿ ರಾಜೇಶ್ 
ದೇಶ

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂನ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!

49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ.

ತಿರುವನಂತಪುರಂ: ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿವಿ ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ.

49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. ರಾಜೇಶ್ ಚುನಾವಣೆಯಲ್ಲಿ 51 ಮತಗಳನ್ನು ಪಡೆದರು. ಎರಡು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಲು ನೂರಾರು ಪಕ್ಷದ ಕಾರ್ಯಕರ್ತರು ಕಾರ್ಪೊರೇಷನ್ ಹಾಲ್ ಮತ್ತು ಅದರ ಆವರಣದಲ್ಲಿ ಜಮಾಯಿಸಿದ್ದರು. ಜಿ.ಎಸ್. ಅಶಾನಾಥ್ ಮಧ್ಯಾಹ್ನ ನಡೆಯಲಿರುವ ಉಪ ಮೇಯರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಇತ್ತೀಚಿನ ಚುನಾವಣೆಯಲ್ಲಿ ಒಟ್ಟು 101 ಸ್ಥಾನಗಳಲ್ಲಿ ಐವತ್ತು ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಲ್ಲಿ ಒಬ್ಬರಾದ ಕಣ್ಣಮೂಲ ವಾರ್ಡ್‌ನಿಂದ ಗೆದ್ದ ಪಟ್ಟೂರ್ ರಾಧಾಕೃಷ್ಣನ್ ಅವರ ಬೆಂಬಲವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಯಿತು , ಸರಳ ಬಹುಮತ ಪಡೆಯಿತು.

ಎಲ್‌ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಕ್ರಮವಾಗಿ 29 ಮತ್ತು 19 ಸ್ಥಾನಗಳನ್ನು ಗೆದ್ದವು. ಹಿಂದಿನ ಕೌನ್ಸಿಲ್‌ನಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ವಿಳಿಂಜಮ್ ವಾರ್ಡ್‌ನ ಸ್ವತಂತ್ರ ಅಭ್ಯರ್ಥಿಯ ಮರಣದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು. ಎರಡನೇ ಅವಧಿಗೆ ನಿಗಮಕ್ಕೆ ಆಯ್ಕೆಯಾದ ರಾಜೇಶ್, ಕೊಡಂಗನೂರು ವಾರ್ಡ್ ಪ್ರತಿನಿಧಿಸುತ್ತಾರೆ.

ಪ್ರಮಾಣವಚನ ಸಮಾರಂಭದಲ್ಲಿ ಪಕ್ಷದ ವಿವಿಧ ನಾಯಕರು ,ಬಿಜೆಪಿಯ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್, ಸಿಕೆ ಪದ್ಮನಾಭನ್ ಮತ್ತು ಸಿಪಿಎಂನ ಮಾಜಿ ಸಚಿವ ಮತ್ತು ಹಾಲಿ ಶಾಸಕ ಕಡಕಂಪಳ್ಳಿ ಸುರೇಂದ್ರನ್ ಭಾಗವಹಿಸಿದ್ದರು.

ಕಾನೂನು ಪದವೀಧರರಾದ ವಿ.ವಿ. ರಾಜೇಶ್ ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಿರುವನಂತಪುರಂ ಕಾರ್ಪೊರೇಷನ್‌ನ ಕೌನ್ಸಿಲರ್ ಆಗಿ ಇದು ಅವರ ಎರಡನೇ ಅವಧಿ. ಹಿಂದೆ, ಅವರು ಪಕ್ಷದ ತಿರುವನಂತಪುರಂ ಜಿಲ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಬಿಜೆಪಿಯ ಉಪ ಮೇಯರ್ ಅಭ್ಯರ್ಥಿ ಜಿ.ಎಸ್. ಅಶಾನಾಥ್ ಈ ಬಾರಿ ಕೌನ್ಸಿಲರ್ ಆಗಿ ಹ್ಯಾಟ್ರಿಕ್ ಗಳಿಸಿದ್ದಾರೆ. ಅವರು ಕರುಮಂ ವಾರ್ಡ್ ಪ್ರತಿನಿಧಿಸುತ್ತಾರೆ. ಕೌನ್ಸಿಲರ್ ಕರುಮಂ ಚಂದ್ರನ್ ಅವರ ನಿಧನದ ನಂತರ 2017 ರ ಉಪಚುನಾವಣೆಯಲ್ಲಿ ಅಶಾನಾಥ್ ಅವರ ಚೊಚ್ಚಲ ಗೆಲುವು ಕಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕ್ರಿಕೆಟಿಗ ವೈಭವ್ ಸೂರ್ಯವಂಶಿ ಸೇರಿ 20 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ!

ಹೊಸ ವರ್ಷಕ್ಕೂ ಮುನ್ನ ಯುದ್ಧ ಅಂತ್ಯಗೊಳಿಸುವ ಬಗ್ಗೆ ಝೆಲೆನ್ಸ್ಕಿ ಸುಳಿವು

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್‌ ಅಭ್ಯರ್ಥಿಗಳ ಗೆಲುವು

50 ಲಕ್ಷದ ಅದ್ಧೂರಿ ವಿವಾಹ: 'ಫಸ್ಟ್​​ ನೈಟ್​​ ದಿನ ಗೊತ್ತಾಯ್ತು ಅವ್ನು ಗಂಡಸೇ ಅಲ್ಲ.. ತಿಂಗಳಾದ್ರೂ ಹೆಂಡ್ತಿ ಜತೆ ಮಲಗಿಲ್ಲ'

Year Ender 2025: ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಟಾಪ್ 10 ಭಾರತೀಯ ಸಿನಿಮಾಗಳು!

SCROLL FOR NEXT