ವಿಕ್ರಮ್ 
ದೇಶ

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ 1 ಲಕ್ಷ ರೂಪಾಯಿ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು !

ಸಂಗರೆಡ್ಡಿ ಜಿಲ್ಲೆಯ ಕಂದುಕೂರು ಪ್ರದೇಶದ ನಿವಾಸಿ ವಿಕ್ರಮ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು

ತೆಲಂಗಾಣ: 18 ವರ್ಷದ ಯುವಕನೊಬ್ಬ ಬೆಟ್ಟಿಂಗ್ ಆ್ಯಪ್ ಮೂಲಕ 1 ಲಕ್ಷ ರೂ. ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಂಗರೆಡ್ಡಿ ಜಿಲ್ಲೆಯ ಕಂದುಕೂರು ಪ್ರದೇಶದ ನಿವಾಸಿ ವಿಕ್ರಮ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವರದಿಗಳ ಪ್ರಕಾರ, ಹೈದರಾಬಾದ್‌ನಲ್ಲಿ ಟ್ಯಾಕ್ಸಿ ಚಾಲಕನೊಬ್ಬ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಪಡೆದ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಾರಗಳ ನಂತರ ಮತ್ತೊಂದು ಪ್ರಕರಣ ದಾಖಲಾಗಿದೆ.

ಏವಿಯೇಟರ್ ಎಂಬ ಆನ್‌ಲೈನ್ ಆಟ ಆಡಲು ಜನರಿಂದ ಸಾಲ ಪಡೆದಿರುವುದಾಗಿ ಅವರ ಮನೆಯಲ್ಲಿ ದೊರೆತ ಡೆತ್ ನೋಟಿನಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಯಿತು ಮತ್ತು ಬಲಿಪಶುವಿನ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಯಾದದ್ರಿ-ಭುವನಗರಿ ಜಿಲ್ಲೆಯ ಇಪ್ಪತ್ತನಾಲ್ಕು ವರ್ಷದ ಪಲಾಡುಗು ಸಾಯಿ ಕಳೆದ ಎರಡು ವರ್ಷಗಳಿಂದ ಆನ್‌ಲೈನ್ ಬೆಟ್ಟಿಂಗ್‌ಗೆ ವ್ಯಸನಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

TNIE ವರದಿ ಫಲಶೃತಿ: ಸ್ವಚ್ಛತೆ ಪರಿಶೀಲಿಸಲು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಪಿಗೆ ಭೇಟಿ

SCROLL FOR NEXT