ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜು  
ದೇಶ

ದೆಹಲಿ ವಾಯು ಗುಣಮಟ್ಟ ಅತ್ಯಂತ 'ಗಂಭೀರ'; ದಟ್ಟವಾದ ಮಂಜು; 128 ವಿಮಾನಗಳು ರದ್ದು

ಹದಗೆಡುತ್ತಿರುವ ಹವಾಮಾನ ಪರಿಸ್ಥಿತಿಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಮತ್ತು ಆಗಮಿಸುವ ಕನಿಷ್ಠ 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಗ್ಗೆ ಮತ್ತೊಮ್ಮೆ ದಟ್ಟವಾದ ಮಂಜು ಆವೃತವಾಗಿದ್ದು, ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದೆ. ದೆಹಲಿಯಲ್ಲಿ ಇಂದು ದಟ್ಟವಾದ ಮಂಜು ಆವರಿಸಿದ್ದರಿಂದ ಕನಿಷ್ಠ 120 ವಿಮಾನಗಳು ರದ್ದಾಗಿವೆ.

ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ(AQI) 402 ಇಳಿದಿದ್ದು, ನಗರದ ಗಾಳಿಯ ಗುಣಮಟ್ಟ 'ಗಂಭೀರ'ವಾಗಿದೆ.

ರಾಷ್ಟ್ರ ರಾಜಧಾನಿಯಾದ್ಯಂತ ಒಟ್ಟು 40 ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳಲ್ಲಿ, 22 ಕಡೆ 'ಗಂಭೀರ' ಗಾಳಿಯ ಗುಣಮಟ್ಟ ವರದಿ ಮಾಡಿದರೆ, 14 ಕೇಂದ್ರಗಳು 'ತುಂಬಾ ಕಳಪೆ' ಮಟ್ಟವನ್ನು ದಾಖಲಿಸಿವೆ. ಆದರೆ ಮೂರು ಕೇಂದ್ರಗಳ ಡೇಟಾ ಲಭ್ಯವಿಲ್ಲ.

ಪಿಟಿಐ ವರದಿ ಮಾಡಿದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ದತ್ತಾಂಶದ ಪ್ರಕಾರ, ಪೂರ್ವ ದೆಹಲಿಯ ವಿವೇಕ್ ವಿಹಾರ್ 456 ರ AQI ಯೊಂದಿಗೆ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟವನ್ನು ವರದಿ ಮಾಡಿದೆ.

ಸಿಪಿಸಿಬಿ ಮಾನದಂಡಗಳ ಪ್ರಕಾರ, 401 ಮತ್ತು 500 ರ ನಡುವಿನ ವಾಯು ಗುಣಮಟ್ಟ ಗಂಭೀರ ವರ್ಗಕ್ಕೆ ಸೇರುತ್ತದೆ, ಇದು ಗಂಭೀರ ಆರೋಗ್ಯ ಅಪಾಯಗಳನ್ನುಂಟುಮಾಡುತ್ತದೆ.

ಮುಂದಿನ ಮೂರು ದಿನಗಳಲ್ಲಿ ನಗರದ ಗಾಳಿಯ ಗುಣಮಟ್ಟವು ತುಂಬಾ ಕಳಪೆಯಾಗಿ ಉಳಿಯುವ ನಿರೀಕ್ಷೆಯಿದೆ. ಮುಂದಿನ ಆರು ದಿನಗಳಲ್ಲಿ ಪರಿಸ್ಥಿತಿ ತುಂಬಾ ಕಳಪೆ ಮತ್ತು ಗಂಭೀರ ನಡುವೆ ಏರಿಳಿತಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕನಿಷ್ಠ ತಾಪಮಾನವು ಸಾಮಾನ್ಯಕ್ಕೆ ಹತ್ತಿರದಲ್ಲಿಯೇ ಉಳಿಯುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನವು 22°C ಮತ್ತು 24°C ನಡುವೆ ಮತ್ತು ಕನಿಷ್ಠ ತಾಪಮಾನವು 7°C ಮತ್ತು 9°C ನಡುವೆ ದಾಖಲಾಗುವ ಸಾಧ್ಯತೆಯಿದೆ.

128 ವಿಮಾನಗಳನ್ನು ರದ್ದು

ಹದಗೆಡುತ್ತಿರುವ ಹವಾಮಾನ ಪರಿಸ್ಥಿತಿಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಮತ್ತು ಆಗಮಿಸುವ ಕನಿಷ್ಠ 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಎಂಟು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಅಲ್ಲದೆ ಸುಮಾರು 200 ವಿಮಾನಗಳ ಸೇವೆ ವಿಳಂಬವಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯ ಪರಿಸ್ಥಿತಿಗಳಿಂದಾಗಿ 64 ನಿರ್ಗಮನ ಮತ್ತು 64 ಆಗಮನ ವಿಮಾನಗಳನ್ನು ರದ್ದುಗೊಳಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅವನನ್ನು ಗಲ್ಲಿಗೇರಿಸುವವರೆಗೂ ಹೋರಾಟ': ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ

ಭಾರತೀಯ ಸೇನೆಗೆ 79,000 ಕೋಟಿ ರೂ. ಮೌಲ್ಯದ 'ಆಧುನಿಕ ಶಸ್ತ್ರಾಸ್ತ್ರ' ಖರೀದಿಗೆ DAC ಅನುಮೋದನೆ!

ಉಕ್ರೇನ್ - ರಷ್ಯಾ ಸಮರ ಕೊನೆಗೊಳಿಸಲು ಸಭೆ: ಟ್ರಂಪ್‌ಗೆ 50 ವರ್ಷಗಳ ಭದ್ರತಾ ಗ್ಯಾರಂಟಿ ಕೇಳಿದ ಝೆಲೆನ್ಸ್ಕಿ

ರಷ್ಯಾ ಸೇನೆಗೆ ಸೇರಿದ್ದ10 ಭಾರತೀಯರ ಸಾವು: ವರದಿ

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ: 'ಭಯಾನಕ ದ್ವೇಷ' ದ ಅಪರಾಧ, BJP ವಿರುದ್ಧ ರಾಹುಲ್ ಗಾಂಧಿ ಕಿಡಿ!

SCROLL FOR NEXT