ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!

ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಪೂಂಚ್: ಹೊಸ ವರ್ಷಾಚರಣೆಗೆ ಇನ್ನು ಕೇವಲ ಒಂದು ದಿನ ಇರುವಂತೆಯೇ ಗಡಿಯಲ್ಲಿ ಉಗ್ರರ ಕರಿ ನೆರಳು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್, ಕಿಶ್ತ್ವಾರ್ ಜಿಲ್ಲೆಗಳ ಕಣಿವೆ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮತ್ತು ಈ ಪ್ರದೇಶದ ಮೇಲೆ ನಿಗಾ ವಹಿಸಲು ಡ್ರೋನ್‌ ಮತ್ತಿತರ ವೈಮಾನಿಕ ಕಣ್ಗಾವಲು ಸಲಕರಣೆಗಳನ್ನು ಪಡೆಗಳು ಬಳಸಿವೆ.

ವರದಿಗಳ ಪ್ರಕಾರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎರಡು ಗುಂಪುಗಳು ಈ ಪ್ರದೇಶದಲ್ಲಿ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿಂದೆ ಇಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿತ್ತು.

ಶಂಕಿತ ಭಯೋತ್ಪಾದಕರ ಚಲನವಲನದ ನಂತರ ಪೂಂಚ್‌ನ ಇಂಡೋ-ಪಾಕ್ ಗಡಿಯಲ್ಲಿ ಸೇನೆಯ ರೋಮಿಯೋ ಫೋರ್ಸ್ ಶೋಧ ಕಾರ್ಯಾಚರಣೆ ನಡೆಸಿತ್ತು. ವೈಮಾನಿಕ ಕಣ್ಗಾವಲು ಬೆಂಬಲ ಮತ್ತು ಸ್ನಿಫರ್ ಡಾಗ್‌ಗಳನ್ನು ಸಶಸ್ತ್ರ ಪಡೆ ಹೊಂದಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

SCROLL FOR NEXT