ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 
ದೇಶ

AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿ

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.

ಕೋಲ್ಕತ್ತಾ: ಎಸ್‌ಐಆರ್ ಎನ್ನುವುದು ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ 'ಹಗರಣ' ಎಂದು ದೂರಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಟಿಎಂಸಿ ಮುತ್ತಿಗೆ ಹಾಕಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.

'SIR ನಿಂದ ಸುಮಾರು 60 ಜನರು ಸಾವಿಗೀಡಾಗಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ. ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ ಸಹ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ' ಎಂದು ಅವರು ಹೇಳಿದರು.

ರಾಜ್ಯದ ಜನರು ಇಂತಹ 'ಕಿರುಕುಳ'ವನ್ನು ಸಹಿಸುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜನರು ಬಿಡುವುದಿಲ್ಲ ಎಂದು ಅವರು ಹೇಳಿದರು.

ಚುನಾವಣೆಗಳು ಬಂದಾಗಲೆಲ್ಲಾ 'ಸೋನಾರ್ ಬಾಂಗ್ಲಾ' ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡಿದ್ದರೂ, ವಾಸ್ತವದಲ್ಲಿ, ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತದೆ' ಎಂದು ಬ್ಯಾನರ್ಜಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

ನಮ್ಮದು 4ನೇ ಅತಿದೊಡ್ಡ ಆರ್ಥಿಕತೆ ಎಂದು ಭಾರತ ಹೇಳಿಕೊಳ್ಳುತ್ತಿದೆ; ಆದರೆ ತಲಾವಾರು ಜಿಡಿಪಿ 12 ಪಟ್ಟು ಕಡಿಮೆ!

ಸೊಂಟದಲ್ಲಿದ್ದ ಗನ್, ಗುಂಡು ಸಿಡಿದು NRI ಸಾವು, Video Viral

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ED ಪ್ರಕರಣದಲ್ಲಿ ಜಾಮೀನು ಮಂಜೂರು

ಬಾಂಗ್ಲಾದೇಶದಲ್ಲಿ ಮತ್ತೊಬ್ಬ 'ಹಿಂದೂ' ಗುಂಡೇಟಿಗೆ ಬಲಿ: ಎರಡು ವಾರಗಳಲ್ಲಿ ಮೂರನೇ ಕೊಲೆ!

SCROLL FOR NEXT