ಪ್ರಿಯಾಂಕಾ ಗಾಂಧಿ ವಾದ್ರಾ ಕುಟುಂಬ 
ದೇಶ

ಕುಟುಂಬಕ್ಕೆ ಸೊಸೆ ಆಗಮನದ ಖುಷಿ: ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಹೊಸ ವರ್ಷ ಕಳೆಯಲಿರುವ ಗಾಂಧಿ-ವಾದ್ರಾ ಕುಟುಂಬ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕುಟುಂಬ ರಣಥಂಬೋರ್ ರಾಷ್ಟ್ರೀಯ ಉದ್ಯಾನವನಕ್ಕೆ ಖಾಸಗಿ ಭೇಟಿ ನೀಡಿದ್ದಾರೆ.

ಜೈಪುರ: ಈ ವರ್ಷಾಂತ್ಯದಲ್ಲಿ 2026ರ ಹೊಸ ವರ್ಷ ಆರಂಭದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕುಟುಂಬ ರಣಥಂಬೋರ್ ರಾಷ್ಟ್ರೀಯ ಉದ್ಯಾನವನಕ್ಕೆ ಖಾಸಗಿ ಭೇಟಿ ನೀಡಿದ್ದಾರೆ. ದೆಹಲಿಯ ರಾಜಕೀಯ ಗದ್ದಲದಿಂದ ದೂರವಾಗಿ ಅವರು ಜನವರಿ 2 ರವರೆಗೆ ಶೇರ್ ಬಾಗ್ ಹೋಟೆಲ್‌ನಲ್ಲಿ ಹೊಸ ವರ್ಷವನ್ನು ಸ್ವಾಗತಿಸಲಿದ್ದಾರೆ. ಈ ಭೇಟಿ ಸಂಪೂರ್ಣವಾಗಿ ಖಾಸಗಿಯಾಗಿದೆ. ಯಾವುದೇ ಸಭೆಗಳಿಲ್ಲ. ಯಾವುದೇ ರಾಜಕೀಯವಿಲ್ಲ. ಕೇವಲ ಕುಟುಂಬದ ಸಮಯ, ಗೌಪ್ಯತೆ ಮತ್ತು ಅರಣ್ಯದಲ್ಲಿ ಖಾಸಗಿಯಾಗಿ ಕಳೆಯುವ ಸಮಯವಾಗಿರುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸೋನಿಯಾ ಗಾಂಧಿ ಈ ಪ್ರವಾಸದಲ್ಲಿ ಕುಟುಂಬದವರ ಜೊತೆ ಸೇರುವ ನಿರೀಕ್ಷೆಯಿಲ್ಲ.

ಗಮನ ಸೆಳೆಯಲಿರುವ ಭೇಟಿ

ಆದರೆ ವಾದ್ರಾ-ಗಾಂಧಿ ಕುಟುಂಬದ ಈ ಭೇಟಿ ಸಾಕಷ್ಟು ಗಮನ ಸೆಳೆದಿದೆ. ಪ್ರಿಯಾಂಕಾ ಗಾಂಧಿಯವರ ಮಗ ರೈಹಾನ್ ವಾದ್ರಾ ಗೆಳತಿ ಅವಿವಾ ಬೇಗ್ ಮತ್ತು ಆಕೆಯ ಕುಟುಂಬಸ್ಥರು ಈ ಸಂದರ್ಭದಲ್ಲಿ ಜೊತೆಯಾಗಿರುತ್ತಾರೆ. ರೈಹಾನ್ ಮತ್ತು ಅವಿವಾ ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ವದಂತಿಯೂ ಇದೆ. ಎರಡೂ ಕುಟುಂಬಗಳಿಂದ ಇದುವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ರೈಹಾನ್‌ಗೆ, ರಣಥಂಬೋರ್ ಭೇಟಿ ತೀರಾ ವೈಯಕ್ತಿಕ. ವನ್ಯಜೀವಿ ಆಸಕ್ತಿ ಇದೆ. ಆಗಾಗ ಸೋಷಿಯಲ್ ಮೀಡಿಯಾದಲ್ಲಿ ವನ್ಯಜೀವಿಗಳ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ರಣಥಂಬೋರ್‌ನ ಹುಲಿಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಈ ಹಿಂದೆ ಮಾಡಿದ್ದರು. ಅಂತಹ ಕ್ಷಣಕ್ಕೆ ಸ್ಥಳವನ್ನು ಆಯ್ಕೆಮಾಡುವಲ್ಲಿ ಭಾವನಾತ್ಮಕ ಬಂಧವು ಒಂದು ಪಾತ್ರವನ್ನು ವಹಿಸಿರಬಹುದು ಎಂದು ಮೂಲಗಳು ಹೇಳುತ್ತವೆ.

ರೈಹಾನ್ ಮತ್ತು ಅವಿವಾ ಬಾಲ್ಯದಿಂದಲೂ ಪರಸ್ಪರ ಪರಿಚಿತರು. ದೆಹಲಿಯಲ್ಲಿ ನೆಲೆಸಿರುವ ಅವಿವಾ ವೃತ್ತಿಪರ ಛಾಯಾಗ್ರಾಹಕಿ.

ರಾಜಸ್ಥಾನವು ಯಾವಾಗಲೂ ಗಾಂಧಿ ಕುಟುಂಬಕ್ಕೆ ಆಕರ್ಷಣೀಯ ಸ್ಥಳ. ಕೆಲವೊಮ್ಮೆ ಖುಷಿಯ ಸಂತೋಷದ ವಿನೋದದ ವಿಚಾರಕ್ಕಾಗಿ ಆದರೆ ಇನ್ನು ಕೆಲವೊಮ್ಮೆ ವಿವಾದಕ್ಕಾಗಿ. ಸಾರಿಸ್ಕಾ ಹುಲಿ ಮೀಸಲು ಪ್ರದೇಶದಲ್ಲಿ ಸಚಿವ ಸಂಪುಟ ಸಭೆಯನ್ನು ಆಯೋಜಿಸಿದ್ದಕ್ಕಾಗಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಟೀಕೆಗಳನ್ನು ಎದುರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

2nd T20I: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಕೊನೆಗೂ Vaibhav Sooryavanshi ಪದಾರ್ಪಣೆ, ಸಚಿನ್ ದಾಖಲೆ ಧ್ವಂಸ!