ಬಿಜೆಪಿ ಸೇರಿದ ಎಂಟು ಎಎಪಿ ಶಾಸಕರು 
ದೇಶ

ದೆಹಲಿ ಚುನಾವಣೆಗೂ ಮುನ್ನ ಎಂಟು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ

ಇಂದು ಬಿಜೆಪಿ ಸೇರಿದ ಎಲ್ಲಾ ಎಂಟು ಶಾಸಕರಿಗೆ ಈ ಬಾರಿ ಎಎಪಿ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಹೀಗಾಗಿ ಎಎಪಿ ತೊರೆದು, ಬಿಜೆಪಿ ಸೇರಿದ್ದಾರೆ.

ನವದೆಹಲಿ: ಫೆಬ್ರವರಿ 5 ರ ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನ ಬಾಕಿ ಇರುವಾಗ, ಎಂಟು ಎಎಪಿ ಶಾಸಕರು ಶನಿವಾರ ಬಿಜೆಪಿ ಸೇರಿದರು.

ಭ್ರಷ್ಟಾಚಾರ ಆರೋಪ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಸಿದ್ಧಾಂತದಿಂದ ವಿಮುಖವಾಗಲು ಈ ಎಂಟು ಶಾಸಕರು ಶುಕ್ರವಾರ ಆಮ್ ಆದ್ಮಿ ಪಕ್ಷದ(ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಇಂದು ಬಿಜೆಪಿ ಸೇರಿದ ಎಲ್ಲಾ ಎಂಟು ಶಾಸಕರಿಗೆ ಈ ಬಾರಿ ಎಎಪಿ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಹೀಗಾಗಿ ಎಎಪಿ ತೊರೆದು, ಬಿಜೆಪಿ ಸೇರಿದ್ದಾರೆ.

ವಂದನಾ ಗೌರ್ (ಪಾಲಂ), ರೋಹಿತ್ ಮೆಹ್ರೌಲಿಯಾ (ತ್ರಿಲೋಕಪುರಿ), ಗಿರೀಶ್ ಸೋನಿ (ಮದೀಪುರ), ಮದನ್ ಲಾಲ್(ಕಸ್ತೂರ್ಬಾ ನಗರ), ರಾಜೇಶ್ ರಿಷಿ(ಉತ್ತಮ್ ನಗರ), ಬಿ ಎಸ್ ಜೂನ್(ಬಿಜ್ವಾಸನ್), ನರೇಶ್ ಯಾದವ್ (ಮೆಹ್ರೌಲಿ) ಮತ್ತು ಪವನ್ ಶರ್ಮಾ(ಆದರ್ಶ ನಗರ) ಅವರು ಬಿಜೆಪಿ ಸೇರಿದ್ದಾರೆ.

ಮಾಜಿ ಎಎಪಿ ಶಾಸಕ ವಿಜೇಂದರ್ ಗರ್ಗ್ ಸೇರಿದಂತೆ ಆಮ್ ಆದ್ಮಿ ಪಕ್ಷದ ಹಲವು ನಾಯಕರು, ದೆಹಲಿ ಬಿಜೆಪಿ ಉಸ್ತುವಾರಿ ಬೈಜಯಂತ್ ಪಾಂಡಾ ಮತ್ತು ರಾಜ್ಯ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

SSLC exam 2026: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ, All the best

'ಅವರು ರಾಜೀನಾಮೆ ನೀಡಿದ್ದು ಒಳ್ಳೆಯದೇ ಆಯ್ತು': ಉನ್ನತ ಅಧಿಕಾರಿ Joseph Kent ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೀಗಂದಿದ್ದೇಕೆ?-Video

ವಿವಿಧ ರಾಜ್ಯಗಳ ಚುನಾವಣೆ ಬಳಿಕ ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ ತೀರ್ಮಾನ- ಡಿಕೆ ಶಿವಕುಮಾರ್

SCROLL FOR NEXT