ಬಿಜೆಪಿ ಸೇರಿದ ಎಂಟು ಎಎಪಿ ಶಾಸಕರು 
ದೇಶ

ದೆಹಲಿ ಚುನಾವಣೆಗೂ ಮುನ್ನ ಎಂಟು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ

ಇಂದು ಬಿಜೆಪಿ ಸೇರಿದ ಎಲ್ಲಾ ಎಂಟು ಶಾಸಕರಿಗೆ ಈ ಬಾರಿ ಎಎಪಿ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಹೀಗಾಗಿ ಎಎಪಿ ತೊರೆದು, ಬಿಜೆಪಿ ಸೇರಿದ್ದಾರೆ.

ನವದೆಹಲಿ: ಫೆಬ್ರವರಿ 5 ರ ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನ ಬಾಕಿ ಇರುವಾಗ, ಎಂಟು ಎಎಪಿ ಶಾಸಕರು ಶನಿವಾರ ಬಿಜೆಪಿ ಸೇರಿದರು.

ಭ್ರಷ್ಟಾಚಾರ ಆರೋಪ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಸಿದ್ಧಾಂತದಿಂದ ವಿಮುಖವಾಗಲು ಈ ಎಂಟು ಶಾಸಕರು ಶುಕ್ರವಾರ ಆಮ್ ಆದ್ಮಿ ಪಕ್ಷದ(ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಇಂದು ಬಿಜೆಪಿ ಸೇರಿದ ಎಲ್ಲಾ ಎಂಟು ಶಾಸಕರಿಗೆ ಈ ಬಾರಿ ಎಎಪಿ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಹೀಗಾಗಿ ಎಎಪಿ ತೊರೆದು, ಬಿಜೆಪಿ ಸೇರಿದ್ದಾರೆ.

ವಂದನಾ ಗೌರ್ (ಪಾಲಂ), ರೋಹಿತ್ ಮೆಹ್ರೌಲಿಯಾ (ತ್ರಿಲೋಕಪುರಿ), ಗಿರೀಶ್ ಸೋನಿ (ಮದೀಪುರ), ಮದನ್ ಲಾಲ್(ಕಸ್ತೂರ್ಬಾ ನಗರ), ರಾಜೇಶ್ ರಿಷಿ(ಉತ್ತಮ್ ನಗರ), ಬಿ ಎಸ್ ಜೂನ್(ಬಿಜ್ವಾಸನ್), ನರೇಶ್ ಯಾದವ್ (ಮೆಹ್ರೌಲಿ) ಮತ್ತು ಪವನ್ ಶರ್ಮಾ(ಆದರ್ಶ ನಗರ) ಅವರು ಬಿಜೆಪಿ ಸೇರಿದ್ದಾರೆ.

ಮಾಜಿ ಎಎಪಿ ಶಾಸಕ ವಿಜೇಂದರ್ ಗರ್ಗ್ ಸೇರಿದಂತೆ ಆಮ್ ಆದ್ಮಿ ಪಕ್ಷದ ಹಲವು ನಾಯಕರು, ದೆಹಲಿ ಬಿಜೆಪಿ ಉಸ್ತುವಾರಿ ಬೈಜಯಂತ್ ಪಾಂಡಾ ಮತ್ತು ರಾಜ್ಯ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT