ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ಕೇಂದ್ರ ಬಜೆಟ್ 2025: ವಿಮಾ ವಲಯದಲ್ಲಿ FDI ಮಿತಿ ಶೇ.74 ರಿಂದ ಶೇ.100ಕ್ಕೆ ಹೆಚ್ಚಳ

ವಿಮಾ ವಲಯದಲ್ಲಿ ವಿದೇಶಿ ನೇರ ಹೂಡಿಕೆ - ಎಫ್.ಡಿ.ಐ ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ಈ ಹೆಚ್ಚಳದ ಮಿತಿಯು ಸಂಪೂರ್ಣ ಪ್ರೀಮಿಯಂ ಭಾರತದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ಸಾಮರ್ಥ್ಯ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಆರು ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸುವ ಗುರಿಯನ್ನು 2025-26ನೇ ಸಾಲಿನ ಬಜೆಟ್ ಹೊಂದಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾಹಿತಿ ನೀಡಿದರು.

ಈ ಕ್ಷೇತ್ರಗಳಲ್ಲಿ ಹಣಕಾಸು ವಲಯವೂ ಒಂದಾಗಿದ್ದು, ಇದು ವಿಮೆ, ಪಿಂಚಣಿಗಳು, ದ್ವಿಪಕ್ಷೀಯ ಹೂಡಿಕೆ ಒಪ್ಪಂದಗಳು (ಬಿಐಟಿಎಸ್) ಮತ್ತು ಮುಂತಾದ ಕ್ಷೇತ್ರಗಳನ್ನು ಒಳಗೊಂಡಿದೆ.

ವಿಮಾ ಕ್ಷೇತ್ರದಲ್ಲಿ ಎಫ್.ಡಿ.ಐ: ವಿಮಾ ವಲಯದಲ್ಲಿ ವಿದೇಶಿ ನೇರ ಹೂಡಿಕೆ - ಎಫ್.ಡಿ.ಐ ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ಈ ಹೆಚ್ಚಳದ ಮಿತಿಯು ಸಂಪೂರ್ಣ ಪ್ರೀಮಿಯಂ ಭಾರತದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಷರತ್ತುಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ಸರಳಗೊಳಿಸಲಾಗುತ್ತದೆ ಎಂದು ಅವರು ಹೇಳಿದರು.

ಪಿಂಚಣಿ ವಲಯ: ಪಿಂಚಣಿ ಉತ್ಪನ್ನಗಳ ನಿಯಂತ್ರಣಕ್ಕಾಗಿ ಸಮನ್ವಯ ಮತ್ತು ಅಭಿವೃದ್ಧಿಗಾಗಿ ಒಂದು ವೇದಿಕೆಯನ್ನು ಸ್ಥಾಪಿಸಲಾಗುವುದು ಎಂದರು.

ಕೆವೈಸಿ ಸರಳೀಕರಣ: 2025ರಲ್ಲಿ ನವೀಕರಿಸಿದ ಕೇಂದ್ರೀಯ ಕೆವೈಸಿ ನೋಂದಣಿ ಯೋಜನೆ ಜಾರಿಗೊಳಿಸಲಾಗುವುದು, ನಿಯಮಿತವಾಗಿ ನವೀಕರಣಕ್ಕಾಗಿ ಸುವ್ಯವಸ್ಥಿತವಾದ ವ್ಯವಸ್ಥೆಯನ್ನು ಸಹ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದರು.

ಕಂಪೆನಿಗಳ ವಿಲೀನ: ಕಂಪನಿ ವಿಲೀನ ಪ್ರಕ್ರಿಯೆಗಳಿಗೆ ತ್ವರಿತ ಅನುಮೋದನೆ ನೀಡುವ ಕಾರ್ಯವಿಧಾನಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು. ತ್ವರಿತ ವಿಲೀನಗಳ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು ಮತ್ತು ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ದ್ವಿಪಕ್ಷೀಯ ಹೂಡಿಕೆ ಒಪ್ಪಂದಗಳು: ಸುಸ್ಥಿರ ವಿದೇಶಿ ಹೂಡಿಕೆಯನ್ನು ಉತ್ತೇಜಿಸಲು ಮತ್ತು “ಭಾರತದ ಅಭಿವೃದ್ಧಿ ಮೊದಲು” ಸ್ಫೂರ್ತಿಯಡಿ ಪ್ರಸ್ತುತ ಮಾದರಿ ದ್ವಿಪಕ್ಷೀಯ ಹೂಡಿಕೆ ಒಪ್ಪಂದಗಳನ್ನು ಪುನರುಜ್ಜೀವನಗೊಳಿಸಲಾಗುವುದು ಮತ್ತು ಹೆಚ್ಚು ಹೂಡಿಕೆ ಸ್ನೇಹಿಯನ್ನಾಗಿ ರೂಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT