ದೇಶ

ಕೃಷಿ ಮೂಲಕ ಬಜೆಟ್ ಆರಂಭಿಸಿದ ಸಚಿವರು ರೈತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಮೌನವಹಿಸಿದರು: ಕಾಂಗ್ರೆಸ್ ಟೀಕೆ

2025-26ರ ಕೇಂದ್ರ ಬಜೆಟ್ ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಚೌಕಟ್ಟಿನ ಆರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಪ್ರಾರಂಭಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಶನಿವಾರ ಮಂಡಿಸಿದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿದ ಘೋಷಣೆಗಳ ಬಗ್ಗೆ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾನೂನುಬದ್ಧ ಖಾತರಿಯಾಗಿ ಕನಿಷ್ಠ ಬೆಂಬಲ ಬೆಲೆ(MSP) ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಮೌನವಾಗಿದ್ದಾರೆ ಎಂದು ಆರೋಪಿಸಿದೆ.

2025-26ರ ಕೇಂದ್ರ ಬಜೆಟ್ ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಚೌಕಟ್ಟಿನ ಆರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಪ್ರಾರಂಭಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ತಮ್ಮ ಬಜೆಟ್ ಭಾಷಣದಲ್ಲಿ, ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುವ ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆಯನ್ನು ಅವರು ಘೋಷಿಸಿದರು.

ಆದರೆ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ವಿತ್ತಮಂತ್ರಿ ಕೃಷಿಯಿಂದ ಬಜೆಟ್ ಮಂಡನೆ ಪ್ರಾರಂಭ ಮಾಡಿದರು. ಆದರೆ ರೈತರ ಬೇಡಿಕೆಗಳು ಮತ್ತು ಕೃಷಿ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ಬಗ್ಗೆ ಸಂಪೂರ್ಣವಾಗಿ ಮೌನವಾಗಿದ್ದಾರೆ. ಕಾನೂನು ಖಾತರಿಯಾಗಿ ಎಂಎಸ್ ಪಿ, ಕೃಷಿ ಸಾಲ ಮನ್ನಾ, ಪಿಎಂ ಕಿಸಾನ್ ಪಾವತಿಗಳ ಹಣದುಬ್ಬರ ಸೂಚ್ಯಂಕ ಮತ್ತು ಪಿಎಂ ಫಸಲ್ ಬಿಮಾ ಯೋಜನೆಗೆ ಸುಧಾರಣೆಗಳು ಇತ್ಯಾದಿಗಳ ಬಗ್ಗೆ ಮಾತನಾಡಲೇ ಇಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಜೈರಾಮ್ ರಮೇಶ್, "ಫೇಕ್ ಇನ್ ಇಂಡಿಯಾ ಆಗಿ ಮಾರ್ಪಟ್ಟ ಮೇಕ್ ಇನ್ ಇಂಡಿಯಾ ಈಗ ರಾಷ್ಟ್ರೀಯ ಉತ್ಪಾದನಾ ಮಿಷನ್" ಎಂಬ ಹೊಸ ಹೆಸರು ಪಡೆದುಕೊಂಡಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT