ದೇಶ

ಕೃಷಿ ಮೂಲಕ ಬಜೆಟ್ ಆರಂಭಿಸಿದ ಸಚಿವರು ರೈತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಮೌನವಹಿಸಿದರು: ಕಾಂಗ್ರೆಸ್ ಟೀಕೆ

2025-26ರ ಕೇಂದ್ರ ಬಜೆಟ್ ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಚೌಕಟ್ಟಿನ ಆರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಪ್ರಾರಂಭಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಶನಿವಾರ ಮಂಡಿಸಿದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿದ ಘೋಷಣೆಗಳ ಬಗ್ಗೆ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾನೂನುಬದ್ಧ ಖಾತರಿಯಾಗಿ ಕನಿಷ್ಠ ಬೆಂಬಲ ಬೆಲೆ(MSP) ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಮೌನವಾಗಿದ್ದಾರೆ ಎಂದು ಆರೋಪಿಸಿದೆ.

2025-26ರ ಕೇಂದ್ರ ಬಜೆಟ್ ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಚೌಕಟ್ಟಿನ ಆರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಪ್ರಾರಂಭಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ತಮ್ಮ ಬಜೆಟ್ ಭಾಷಣದಲ್ಲಿ, ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುವ ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆಯನ್ನು ಅವರು ಘೋಷಿಸಿದರು.

ಆದರೆ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ವಿತ್ತಮಂತ್ರಿ ಕೃಷಿಯಿಂದ ಬಜೆಟ್ ಮಂಡನೆ ಪ್ರಾರಂಭ ಮಾಡಿದರು. ಆದರೆ ರೈತರ ಬೇಡಿಕೆಗಳು ಮತ್ತು ಕೃಷಿ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ಬಗ್ಗೆ ಸಂಪೂರ್ಣವಾಗಿ ಮೌನವಾಗಿದ್ದಾರೆ. ಕಾನೂನು ಖಾತರಿಯಾಗಿ ಎಂಎಸ್ ಪಿ, ಕೃಷಿ ಸಾಲ ಮನ್ನಾ, ಪಿಎಂ ಕಿಸಾನ್ ಪಾವತಿಗಳ ಹಣದುಬ್ಬರ ಸೂಚ್ಯಂಕ ಮತ್ತು ಪಿಎಂ ಫಸಲ್ ಬಿಮಾ ಯೋಜನೆಗೆ ಸುಧಾರಣೆಗಳು ಇತ್ಯಾದಿಗಳ ಬಗ್ಗೆ ಮಾತನಾಡಲೇ ಇಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಜೈರಾಮ್ ರಮೇಶ್, "ಫೇಕ್ ಇನ್ ಇಂಡಿಯಾ ಆಗಿ ಮಾರ್ಪಟ್ಟ ಮೇಕ್ ಇನ್ ಇಂಡಿಯಾ ಈಗ ರಾಷ್ಟ್ರೀಯ ಉತ್ಪಾದನಾ ಮಿಷನ್" ಎಂಬ ಹೊಸ ಹೆಸರು ಪಡೆದುಕೊಂಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT