ಸಾಂದರ್ಭಿಕ ಚಿತ್ರ  
ದೇಶ

Budget 2025: ಪರಮಾಣು ಇಂಧನ ಮಿಷನ್ ಘೋಷಣೆ; 2047ರ ವೇಳೆಗೆ 100 GW ಉತ್ಪಾದನೆ ಗುರಿ

ಇಂದು ಲೋಕಸಭೆಯಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಿದ ಸೀತಾರಾಮನ್ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ನವದೆಹಲಿ: ದೇಶದಲ್ಲಿ ಇಂಧನ ಪರಿವರ್ತನೆಗಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಪರಮಾಣು ಇಂಧನ ಮಿಷನ್ ಘೋಷಣೆ ಮಾಡಿದ್ದು, 2047ರ ವೇಳೆಗೆ ಕನಿಷ್ಠ 100 ಗಿಗಾವ್ಯಾಟ್ ಇಂಧನ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಿದ ಸೀತಾರಾಮನ್ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

“2047 ರ ವೇಳೆಗೆ ಕನಿಷ್ಠ 100 ಗಿಗಾವ್ಯಾಟ್ ಪರಮಾಣು ಇಂಧನ ಉತ್ಪಾದನೆ ಮಾಡುವುದು ನಮ್ಮ ಗುರಿಯಾಗಿದೆ. ಈ ಗುರಿಯತ್ತ ಖಾಸಗಿ ವಲಯದೊಂದಿಗೆ ಸಕ್ರಿಯ ಪಾಲುದಾರಿಕೆಗಾಗಿ, ಪರಮಾಣು ಶಕ್ತಿ ಕಾಯ್ದೆ ಮತ್ತು ಪರಮಾಣು ಹಾನಿಗಾಗಿ ನಾಗರಿಕ ಹೊಣೆಗಾರಿಕೆ ಕಾಯ್ದೆಗೆ ತಿದ್ದುಪಡಿಗಳನ್ನು ತರಲಾಗುವುದು” ಎಂದು ಹಣಕಾಸು ಸಚಿವರು ಹೇಳಿದರು.

ಇದರ ಜೊತೆಗೆ, ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ(SMRs) ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ಪರಮಾಣು ಶಕ್ತಿ ಮಿಷನ್‌ನ ಯೋಜನೆಗಳನ್ನು ಹಣಕಾಸು ಸಚಿವರು ಬಹಿರಂಗಪಡಿಸಿದರು.

2033ರ ವೇಳೆಗೆ ಕನಿಷ್ಠ ಐದು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳು ಕಾರ್ಯರೂಪಕ್ಕೆ ಬರಲಿವೆ. ಈ ಮಿಷನ್‌ಗೆ 20,000 ಕೋಟಿ ರೂ. ಬಜೆಟ್ ನಲ್ಲಿ ಮೀಸಲಿಡಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ಫೆಬ್ರವರಿಯಲ್ಲಿ, ಕೇಂದ್ರ ಸರ್ಕಾರ 18 ಪರಮಾಣು ವಿದ್ಯುತ್ ರಿಯಾಕ್ಟರ್‌ಗಳ ಆರಂಭದ ಬಗ್ಗೆ ಘೋಷಿಸಿತ್ತು. ಈ ರಿಯಾಕ್ಟರ್‌ಗಳು ಒಟ್ಟಾರೆಯಾಗಿ 13,800 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತವೆ. ಇದರೊಂದಿಗೆ 2031-32 ರ ವೇಳೆಗೆ ಇಂಧನ ವಲಯದ ಒಟ್ಟು ಪರಮಾಣು ವಿದ್ಯುತ್ ಸಾಮರ್ಥ್ಯವು 22,480 ಮೆಗಾವ್ಯಾಟ್ ತಲುಪುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!