ಸಾಂದರ್ಭಿಕ ಚಿತ್ರ  
ದೇಶ

Budget 2025: ಪರಮಾಣು ಇಂಧನ ಮಿಷನ್ ಘೋಷಣೆ; 2047ರ ವೇಳೆಗೆ 100 GW ಉತ್ಪಾದನೆ ಗುರಿ

ಇಂದು ಲೋಕಸಭೆಯಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಿದ ಸೀತಾರಾಮನ್ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ನವದೆಹಲಿ: ದೇಶದಲ್ಲಿ ಇಂಧನ ಪರಿವರ್ತನೆಗಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಪರಮಾಣು ಇಂಧನ ಮಿಷನ್ ಘೋಷಣೆ ಮಾಡಿದ್ದು, 2047ರ ವೇಳೆಗೆ ಕನಿಷ್ಠ 100 ಗಿಗಾವ್ಯಾಟ್ ಇಂಧನ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಿದ ಸೀತಾರಾಮನ್ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

“2047 ರ ವೇಳೆಗೆ ಕನಿಷ್ಠ 100 ಗಿಗಾವ್ಯಾಟ್ ಪರಮಾಣು ಇಂಧನ ಉತ್ಪಾದನೆ ಮಾಡುವುದು ನಮ್ಮ ಗುರಿಯಾಗಿದೆ. ಈ ಗುರಿಯತ್ತ ಖಾಸಗಿ ವಲಯದೊಂದಿಗೆ ಸಕ್ರಿಯ ಪಾಲುದಾರಿಕೆಗಾಗಿ, ಪರಮಾಣು ಶಕ್ತಿ ಕಾಯ್ದೆ ಮತ್ತು ಪರಮಾಣು ಹಾನಿಗಾಗಿ ನಾಗರಿಕ ಹೊಣೆಗಾರಿಕೆ ಕಾಯ್ದೆಗೆ ತಿದ್ದುಪಡಿಗಳನ್ನು ತರಲಾಗುವುದು” ಎಂದು ಹಣಕಾಸು ಸಚಿವರು ಹೇಳಿದರು.

ಇದರ ಜೊತೆಗೆ, ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ(SMRs) ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ಪರಮಾಣು ಶಕ್ತಿ ಮಿಷನ್‌ನ ಯೋಜನೆಗಳನ್ನು ಹಣಕಾಸು ಸಚಿವರು ಬಹಿರಂಗಪಡಿಸಿದರು.

2033ರ ವೇಳೆಗೆ ಕನಿಷ್ಠ ಐದು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳು ಕಾರ್ಯರೂಪಕ್ಕೆ ಬರಲಿವೆ. ಈ ಮಿಷನ್‌ಗೆ 20,000 ಕೋಟಿ ರೂ. ಬಜೆಟ್ ನಲ್ಲಿ ಮೀಸಲಿಡಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ಫೆಬ್ರವರಿಯಲ್ಲಿ, ಕೇಂದ್ರ ಸರ್ಕಾರ 18 ಪರಮಾಣು ವಿದ್ಯುತ್ ರಿಯಾಕ್ಟರ್‌ಗಳ ಆರಂಭದ ಬಗ್ಗೆ ಘೋಷಿಸಿತ್ತು. ಈ ರಿಯಾಕ್ಟರ್‌ಗಳು ಒಟ್ಟಾರೆಯಾಗಿ 13,800 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತವೆ. ಇದರೊಂದಿಗೆ 2031-32 ರ ವೇಳೆಗೆ ಇಂಧನ ವಲಯದ ಒಟ್ಟು ಪರಮಾಣು ವಿದ್ಯುತ್ ಸಾಮರ್ಥ್ಯವು 22,480 ಮೆಗಾವ್ಯಾಟ್ ತಲುಪುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT