ಮಮತಾ ಕುಲಕರ್ಣಿ 
ದೇಶ

ಕಿನ್ನರ್ ಅಖಾಡ ಮುಖ್ಯಸ್ಥರಾಗಿ ಮಮತಾ ಕುಲಕರ್ಣಿ ಪಟ್ಟಾಭಿಷೇಕ! ಭುಗಿಲೆದ್ದ ವಿವಾದ

ಸಾಮಾಜಿಕ ಮಾಧ್ಯಮದಲ್ಲಿ ಇಂದು ನಿನ್ನೆಯ ಪತ್ರವೊಂದನ್ನು ಫೋಸ್ಟ್ ಮಾಡಿರುವ ಅಜಯ್ ದಾಸ್, ಕಿನ್ನರ ಅಖಾಡದ ಮಹಾಮಂಡಳೇಶ್ವರ ಆಗಿ ಮಾಡಿರುವುದರಿಂದ ತ್ರಿಪಾಠಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಲಖನೌ: ಕಿನ್ನರ ಅಖಾಡದ ಸ್ಥಾಪಕ ಸದಸ್ಯ ಎಂದು ಹೇಳಿಕೊಳ್ಳುವ ರಿಷಿ ಅಜಯ್ ದಾಸ್ ಅವರು ಕಿನ್ನರ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಡಾ. ಲಕ್ಷ್ಮೀ ನಾರಾಯಣ ತ್ರಿಪಾಠಿ ಅವರನ್ನು ಉಚ್ಚಾಟಿಸಿದ್ದಾರೆ.

ಬಾಲಿವುಡ್ ಮಾಜಿ ನಟಿ ಮಮತಾ ಕುಲಕರ್ಣಿ ಅವರನ್ನು ಕಿನ್ನರ್ ಅಖಾಡದ ಮಹಾಮಂಡಲೇಶ್ವರ ಎಂದು ಪಟ್ಟಾಭಿಷೇಕ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದಾದ ಬೆನ್ನಲ್ಲೇ ವಾಗ್ದಾಳಿ ನಡೆಸಿರುವ ತ್ರಿಪಾಠಿ, ಅಜಯ್ ದಾಸ್ ಅಖಾಡದ ಸದಸ್ಯತ್ವ ಕೂಡಾ ಪಡೆದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಇಂದು ನಿನ್ನೆಯ ಪತ್ರವೊಂದನ್ನು ಫೋಸ್ಟ್ ಮಾಡಿರುವ ಅಜಯ್ ದಾಸ್, ನಟಿಯನ್ನು ಕಿನ್ನರ್ ಅಖಾಡದ ಮಹಾಮಂಡಳೇಶ್ವರ ಆಗಿ ಮಾಡಿರುವುದರಿಂದ ತ್ರಿಪಾಠಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಿನ್ನರ ಅಖಾಡದ ಮಹತ್ವವನ್ನು ಎತ್ತಿಹಿಡಿಯುವ ಯಾವುದೇ ಕೆಲಸವನ್ನು ತ್ರಿಪಾಠಿ ಮಾಡಲಿಲ್ಲ, ಬದಲಿಗೆ ದೇಶದ್ರೋಹ ಆರೋಪದ ಮೇರೆಗೆ ದೇಶ ತೊರೆದಿದ್ದ ಬಾಲಿವುಡ್ ನಟಿಯನ್ನು ಮಹಾಮಂಡಲೇಶ್ವರಿಯನ್ನಾಗಿ ಮಾಡಲಾಗಿದೆ ಎಂದು ತ್ರಿಪಾಠಿ ವಿರುದ್ಧ ರಿಷಿ ಅಜಯ್ ದಾಸ್ ವಾಗ್ದಾಳಿ ನಡೆಸಿದ್ದಾರೆ.

ಈ ಹೇಳಿಕೆ ಕುರಿತು ಪ್ರತ್ರಿಕ್ರಿಯಿಸಿರುವ ತ್ರಿಪಾಠಿ, ಅಜಯ್ ದಾಸ್ ಅಖಾಡದ ಸದಸ್ಯರೂ ಕೂಡಾ ಆಗಿಲ್ಲ. ಅಖಾಡ ನನ್ನಿಂದ ನೋಂದಣಿಯಾಗಿದೆ. ಅವರು ನೀಡಿರುವ ಪತ್ರ ಕಸಕ್ಕೆ ಸಮಾನವಾಗಿದೆ. ಕಿನ್ನರ ಅಖಾಡದ ಪರವಾಗಿ ಪತ್ರ ನೀಡಲು ದಾಸ್ ಅವರಿಗೆ ಯಾವುದೇ ಹಕ್ಕಿಲ್ಲ ಎಂದು ತ್ರಿಪಾಠಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT