ಸದನದಿಂದ ಹೊರನಡೆದ ವಿಪಕ್ಷಗಳು. 
ದೇಶ

ಬಜೆಟ್ 2025: ವಿಪಕ್ಷಗಳ ಗದ್ದಲ, ಸದನದಿಂದ ಹೊರ ನಡೆದ ಎಸ್​ಪಿ ಸಂಸದರು

ಬಜೆಟ್ ಮಂಡನೆ ಆರಂಭವಾಗುತ್ತಿದ್ದಂತೆಯೇ ಗದ್ದಲ ಸೃಷ್ಟಿಸಿದ ವಿಪಕ್ಷಗಳು, ಉತ್ತರಪ್ರದೇಶದ ಪ್ರಯಾಗ್ ರಾಜ್'ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ನವದೆಹಲಿ: ಸಂಸತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಬಜೆಟ್​ ಮಂಡನೆ ಆರಂಭಿಸಿದ್ದು, ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇದೇ ವೇಳೆ ವಿಪಕ್ಷಗಳು ಗದ್ದಲ ಸೃಷ್ಟಿಸಿದ್ದು, ಸಮಾಜವಾದಿ ಪಕ್ಷದ ಸಂಸದರು ಸದನದಿಂದ ಹೊರ ನಡೆದಿದ್ದಾರೆ.

ಬಜೆಟ್ ಮಂಡನೆ ಆರಂಭವಾಗುತ್ತಿದ್ದಂತೆಯೇ ಗದ್ದಲ ಸೃಷ್ಟಿಸಿದ ವಿಪಕ್ಷಗಳು, ಉತ್ತರಪ್ರದೇಶದ ಪ್ರಯಾಗ್ ರಾಜ್'ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ಆದರೆ, ಇದಕ್ಕೆ ಸ್ಪೀಕರ್ ಅನುಮತಿ ನಿರಾಕಸಿದರು, ಬಳಿಕ ನಿರ್ಮಲಾ ಅವರು ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಕೆಂಡಾಮಂಡಲಗೊಂಡ ಸಮಾಜವಾದಿ ಪಕ್ಷದ ಸಂಸದರು, ಸದನದಿಂದ ಹೊರನಡೆದರು.

ಬಳಿಕ ಬಜೆಟ್ ನಿರ್ಮಲಾ ಅವರು ಬಜೆಟ್ ಮಂಡನೆ ಆರಂಭಿಸಿದರು. ಗೌರವಾನ್ವಿತ ಸ್ಪೀಕರ್, ನಾನು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತೇನೆ, ಅಭಿವೃದ್ದಿಯನ್ನು ಹೆಚ್ಚಿಸಲು ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತೇವೆ. ಯುವಜನತೆ, ದಲಿತರು, ಅನ್ನದಾತರು ಮತ್ತು ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video Viral

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ತಳ್ಳಿಹಾಕಿದ CBI; ಆದ್ರೆ ಕೃತಕ 'ತುಪ್ಪ' ಬಳಕೆ ಬಹಿರಂಗ

'ಮಿಯಾಸ್' ಜಗತ್ತನ್ನೇ ಆಳ್ತಾರೆ: ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಮುಗಿಬಿದ್ದ ಮುಸ್ಲಿಂ ನಾಯಕರು! Video

ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಶಾಲಾ ಬಾಲಕಿಯರಿಗೆ ಉಚಿತವಾಗಿ 'ಸ್ಯಾನಿಟರಿ ಪ್ಯಾಡ್‌' ಒದಗಿಸಲು ಸುಪ್ರೀಂ ಆದೇಶ!

SCROLL FOR NEXT