ನಿರ್ಮಲಾ ಸೀತಾರಾಮನ್ 
ದೇಶ

ಕೇಂದ್ರ ಬಜೆಟ್ 2025; ಮಧುಬನಿ ಸೀರೆಯುಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಏನಿದರ ವಿಶೇಷತೆ..?

ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಮಧುಬನಿ ಸೀರೆ ಧರಿಸಿದ್ದಾರೆ. ಈ ಸೀರೆಯನ್ನು ದುಲಾರಿ ದೇವಿ ಅವರು ನಿರ್ಮಲಾ ಅವರಿಗೆ ನೀಡಿದ್ದರು ಎನ್ನಲಾಗಿದೆ.

ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೀರೆ ಹಲವರ ಗಮನ ಸೆಳೆಯುತ್ತಿದೆ.

ನಿರ್ಮಲಾ ಅವರು ಈ ಬಾರಿ ಕೆನೆ ಬಣ್ಣದ ಮಧುಬನಿ ಸೀರೆ ಉಟ್ಟಿದ್ದು, ಕೆಂಪು ಬಣ್ಣದ ರವಿಕೆ, ಶಾಲು ತೊಟ್ಟಿದ್ದಾರೆ. ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಈ ಸೀರೆ ಧರಿಸಿದ್ದಾರೆ. ಈ ಸೀರೆಯನ್ನು ದುಲಾರಿ ದೇವಿ ಅವರು ನಿರ್ಮಲಾ ಅವರಿಗೆ ನೀಡಿದ್ದರು ಎನ್ನಲಾಗಿದೆ.

ಪ್ರತಿ ಬಾರಿಯೂ ಬಜೆಟ್ ದಿನ ನಿರ್ಮಲಾ ಸೀತಾರಾಮನ್ ಅವರು ಧರಿಸುವ ಸೀರೆ ಟ್ರೆಂಡ್ ಆಗುತ್ತದೆ. ವಿಭಿನ್ನ ಸೀರೆಗಳನ್ನು ಉಟ್ಟುಕೊಂಡು ಬರುವ ಮೂಲಕ ನಿರ್ಮಲಾ ಅವರು ದೇಶದ ಜನತೆಯ ಗಮನ ಸೆಳೆಯುತ್ತಾರೆ.

ದುಲಾರಿ ದೇವಿ ಅವರು 2021 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮಿಥಿಲಾ ಕಲಾ ಸಂಸ್ಥಾನದಲ್ಲಿ ಕ್ರೆಡಿಟ್ ಔಟ್ರೀಚ್ ಕಾರ್ಯಕ್ರಮವೊಂದಕ್ಕಾಗಿ ಹಣಕಾಸು ಸಚಿವರು ಮಧುಬನಿಗೆ ಭೇಟಿ ನೀಡಿದ್ದಾಗ, ಅವರು ದುಲಾರಿ ದೇವಿ ಅವರನ್ನು ಭೇಟಿಯಾಗಿದ್ದರು. ಬಿಹಾರದಲ್ಲಿ ಮಧುಬನಿ ಕಲೆಯ ಕುರಿತು ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡಿದ್ದರು. ಆ ಸಂದರ್ಭದಲ್ಲಿ ದುಲಾರಿ ದೇವಿ ಅವರು ಹಣಕಾಸು ಸಚಿವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು ಮತ್ತು ಬಜೆಟ್ ದಿನದಂದು ಅದನ್ನು ಧರಿಸುವಂತೆ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT