ನಿರ್ಮಲಾ ಸೀತಾರಾಮನ್ 
ದೇಶ

ಕೇಂದ್ರ ಬಜೆಟ್ 2025-26 ಪ್ರಸ್ತಾಪಗಳು 10 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್

ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಿಂದ ನಮ್ಮ ಅಭಿವೃದ್ಧಿ ದಾಖಲೆಗಳು ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನವನ್ನು ಸೆಳೆದಿವೆ.

ನವದೆಹಲಿ: ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಿಂದ ನಮ್ಮ ಅಭಿವೃದ್ಧಿ ದಾಖಲೆಗಳು ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನವನ್ನು ಸೆಳೆದಿವೆ. ಭಾರತದ ಸಾಮರ್ಥ್ಯ ಮತ್ತು ಸಾಮರ್ಥ್ಯದ ಮೇಲಿನ ವಿಶ್ವಾಸವು ಈ ಅವಧಿಯಲ್ಲಿ ಬೆಳೆದಿದೆ. ಮುಂದಿನ 5 ವರ್ಷಗಳನ್ನು ಎಲ್ಲಾ ಪ್ರದೇಶಗಳ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುವ, ಸಬ್ಕಾ ವಿಕಾಸ್ ನ್ನು ಸಾಕಾರಗೊಳಿಸುವ ಒಂದು ಅನನ್ಯ ಅವಕಾಶವೆಂದು ನಾವು ನೋಡುಬೇಕಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದು, ಇಂದು ಮಂಡನೆ ಮಾಡಿರುವ ಬಜೆಟ್'ನ 10 ಅಂಶಗಳನ್ನು ಹೆಸರಿಸಿದ್ದಾರೆ.

2025-26ರ ಬಜೆಟ್‌ನಲ್ಲಿ ಬಡತನ, ಯುವಕರು, ಮಹಿಳೆಯರು, ಕೃಷಿ, ಉತ್ಪಾದನೆ, ಎಂಎಸ್‌ಎಂಇಗಳು, ಉದ್ಯೋಗ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ 10 ಪ್ರಮುಖ ಅಭಿವೃದ್ಧಿ ಕ್ರಮಗಳನ್ನು ವಿವರಿಸಿದರು.

  • ಕೃಷಿ ಅಭಿವೃದ್ಧಿ ಮತ್ತು ಉತ್ಪಾದಕತೆಗೆ ಉತ್ತೇಜನ

  • ಗ್ರಾಮೀಣ ಸಮೃದ್ಧಿ ಮತ್ತು ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು

  • ಅಂತರ್ಗತ ಬೆಳವಣಿಗೆಯ ಹಾದಿಯಲ್ಲಿ ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಳ್ಳುವುದು.

  • ಭಾರತದಲ್ಲಿ ಉತ್ಪಾದನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವುದು.

  • MSMEಗಳಿಗೆ ಬೆಂಬಲ

  • ಉದ್ಯೋಗ ಆಧಾರಿತ ಅಭಿವೃದ್ಧಿಗೆ ಅನುವು ಮಾಡಿಕೊಡುವುದು.

  • ಜನರು, ಆರ್ಥಿಕತೆ ಮತ್ತು ನಾವೀನ್ಯತೆಯ ಮೇಲೆ ಹೂಡಿಕೆ

  • ಇಂಧನ ಪೂರೈಕೆಗಳನ್ನು ಭದ್ರಪಡಿಸುವುದು.

  • ಪೂರೈಕೆಗಳನ್ನು ಪ್ರೋತ್ಸಾಹಿಸುವುದು.

  • ನಾವೀನ್ಯತೆಗಳನ್ನು ಪೋಷಿಸುವುದು.

ಬಜೆಟ್​ನ ಮೊದಲ ಆಧಾರ ಸ್ತಂಭವಾಗಿರುವ ಕೃಷಿ ಅಭಿವೃದ್ಧಿ ಮತ್ತು ಉತ್ಪಾದಕತೆಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.

ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ. ಪ್ರಧಾನ ಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.

ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ದಾಖಲೆ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನವನ್ನು ಸೆಳೆದಿವೆ. ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್​ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ಹೇಳಿದರು.

ಬಜೆಟ್ ಭಾಷಣದ ಆರಂಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಗತಿಯನ್ನು ನಿರ್ಮಲಾ ಸೀತಾರಾನ್ ಅವರು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!

Jammu- Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

ರಷ್ಯಾ ಮೇಲೂ ಡ್ರೋನ್ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!

'ನಾನು ಕೂಡ ಪರಪುರುಷನ ಜತೆ ಹೋದರೆ ಒಪ್ಪಿಕೊಳ್ಳುತ್ತಾರೆಯೇ?': ನಟ ಜಯಂ ರವಿ ವಿರುದ್ಧ ಮಾಜಿ ಪತ್ನಿ ಆರತಿ ಕಿಡಿ!

SCROLL FOR NEXT