ಆದಾಯ ತೆರಿಗೆ ಮಿತಿ ಏರಿಕೆ (ಸಾಂದರ್ಭಿಕ ಚಿತ್ರ) 
ದೇಶ

Union Budget 2025: ಮಧ್ಯಮ ವರ್ಗಕ್ಕೆ ಬಂಪರ್; ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷ ರೂ ಗೆ ಏರಿಕೆ

ಬಜೆಟ್ ಅಧಿವೇಶನದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಾವು ಮಂಡಿಸುತ್ತಿರುವ ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗದ ಬಹು ದಿನಗಳ ಬೇಡಿಕೆ ಕೊನೆಗೂ ಈಡೇರಿಸಿದ್ದು ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೇರಿಕೆ ಮಾಡಿದ್ದಾರೆ.

ಈ ಬಗ್ಗೆ ಸಂಸತ್ ಭವನದಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಂದರೆ 12 ಲಕ್ಷ ರೂಪಾಯಿಗಳವರೆಗಿನ ಆದಾಯದ ಮೇಲೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹೊಸ ತೆರಿಗೆ ಪದ್ಧತಿ ಅಡಿಯಲ್ಲಿ 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. ಆದರೆ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ ವಿಧಿಸಲಾಗಿದ್ದು, 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ ವಿಧಿಸಲಾಗಿದೆ. 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ ಮತ್ತು 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.

ಮಧ್ಯಮ ವರ್ಗದ ಮೇಲೆ ಕೇಂದ್ರೀಕರಿಸಲು ವೈಯಕ್ತಿಕ ಆದಾಯ ತೆರಿಗೆ ಸುಧಾರಣೆಗಳನ್ನು ತರಲಾಗಿದೆ. ಹೊಸ ತೆರಿಗೆ ಪದ್ಧತಿ ಅನ್ವಯ 4 ಲಕ್ಷ ರೂ ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಹಿರಿಯ ನಾಗರಿಕರಿಗೆ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂ.ಗೆ ದ್ವಿಗುಣಗೊಳಿಸಲಾಗಿದೆ. ಅಂತೆಯೇ ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.4 ಲಕ್ಷ ರೂ.ಗಳಿಂದ 6 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT