ಸಿಲಿಂಡಲ್ ಸ್ಫೋಟ 
ದೇಶ

ಉತ್ತರ ಪ್ರದೇಶ: ಗ್ಯಾಸ್ ಸಿಲಿಂಡರ್‌ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ, ಭಾರೀ ಸ್ಫೋಟ

ಸ್ಥಳದಲ್ಲಿ ಭಾರೀ ದಟ್ಟ ಹೊಗೆ ಆವರಿಸಿದ್ದು, ಇನ್ನೂ ಸ್ಫೋಟದ ಶಬ್ಧ ಕೇಳಿ ಬರುತ್ತಿದೆ. ಹೀಗಾಗಿ ಟ್ರಕ್ ಬಳಿಕೆ ಹೋಗಲು ಸಾಧ್ಯವಾಗುತ್ತಿಲ್ಲ. ಸಿಲಿಂಡರ್ ಸ್ಫೋಟದ ಶಬ್ದವು ಸುತ್ತಮುತ್ತಲ ಪ್ರದೇಶದ ಹಲವಾರು ಕಿಲೋಮೀಟರ್‌ಗಳವರೆಗೆ ಕೇಳಿಬರುತ್ತಿದೆ.

ಗಾಜಿಯಾಬಾದ್ (ಉತ್ತರ ಪ್ರದೇಶ): ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸರಣಿ ಸ್ಫೋಟ ಸಂಭವಿಸಿರುವ ಘಟನೆಯೊಂದು ಗಾಜಿಯಾಬಾದ್ ಜಿಲ್ಲೆಯ ದೆಹಲಿ-ವಜೀರಾಬಾದ್ ರಸ್ತೆಯ ಭೋಪುರ ಚೌಕ್‌ನಲ್ಲಿ ನಡೆದಿದೆ.

ಬೆಳಿಗ್ಗೆ 4 ಗಂಟೆ ಸುಮಾರಿಗೆ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಟ್ರಕ್ ನಲ್ಲಿದ್ದ 60ಕ್ಕೂ ಹೆಚ್ಚು ಅಡುಗೆ ಅನಿಲದ ಸಿಲಿಂಡರ್ ಗಳು ಸ್ಫೋಟ ಗೊಳ್ಳಲು ಆರಂಭಿಸಿವೆ. ಪರಿಣಾಮ ಸ್ಥಳದಲ್ಲದಿಂದ 4 ಪೀಠೋಪಕರಣಗಳ ಅಂಗಡಿಗಳು ಹಾಗೂ ಕೆಲವು ವಾಹನಗಳು ಸುಟ್ಟು ಕರಕಲಾಗಿದವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 90 ನಿಮಿಷಗಳ ಕಾಲ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಲು ಎಂದು ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ರಾಹುಲ್ ಕುಮಾರ್ ಅವರು ಹೇಳಿದ್ದಾರೆ.

ಸ್ಥಳಕ್ಕೆ ತೆರಳಿದಾಗ ಭಾರೀ ದಟ್ಟ ಹೊಗೆ ಆವರಿಸಿರುವುದು ಕಂಡು ಬಂದಿತ್ತು. ಸ್ಫೋಟದ ಶಬ್ಧ ಕೇಳಿ ಬರುತ್ತಿತ್ತು. ಹೀಗಾಗಿ ಟ್ರಕ್ ಬಳಿಗೆ ಹೋಗಲು ಸಾಧ್ಯವಾಗಲಿಲ್ಲ. ಸಿಲಿಂಡರ್ ಸ್ಫೋಟದ ಶಬ್ದವು ಸುತ್ತಮುತ್ತಲ ಪ್ರದೇಶದ ಹಲವಾರು ಕಿಲೋಮೀಟರ್‌ಗಳವರೆಗೆ ಕೇಳಿಬರುತ್ತಿತ್ತು. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಕಂಡಿ ಬಂದಿಲ್ಲ.

ಸ್ಫೋಟದ ತೀವ್ರತೆಗೆ ಹೆದರಿದ ಜನರು ಆತಂಕಗೊಂಡು ಸ್ಥಳದಿಂದ ಓಡಲು ಆರಂಭಸಿದ್ದರು. ಇದೀಗ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಹೆದರಿದ ಚಾಲಕ, ಪೆಟ್ರೋಲ್ ಬಂಕ್ ಬಳಿ ವಾಹನ ನಿಲ್ಲಿಸಿ, ಓಡಿದ್ದಾನೆ. ಸ್ವಲ್ಪ ಸಮಯದ ನಂತರ ಸ್ಫೋಟ ಆರಂಭವಾಗಿದೆ. ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಕೂಡ ಸ್ಥಳವನ್ನು ತೊರೆದಿದ್ದಾರೆ. ಕೆಲ ಸಿಲಿಂಡರ್ ಗಳು ಪೆಟ್ರೋಲ್ ಬಂಕ್ ಆವರಣದಲ್ಲಿ ಬಿದ್ದಿದ್ದವು. ಆದರೆ, ಸ್ಫೋಟಗೊಂದಿರಲಿಲ್ಲ ಎಂದು ಪ್ರತ್ಯದರ್ಶಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT