ನಿರ್ಮಲಾ ಸೀತಾರಾಮನ್  
ದೇಶ

ಬಜೆಟ್‌ನಲ್ಲಿ ಕೇವಲ 574 ಕೋಟಿ ರೂ ಹಂಚಿಕೆ; ಈ ವರ್ಷವೂ ಜನಗಣತಿ ಅನುಮಾನ

2021-22ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಜನಗಣತಿ ಮತ್ತು ಎನ್ ಪಿಆರ್ ಗೆ 3,768 ಕೋಟಿ ಹಂಚಿಕೆ ಮಾಡಲಾಗಿತ್ತು.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ, ಸಮೀಕ್ಷೆ ಮತ್ತು ರಿಜಿಸ್ಟ್ರಾರ್ ಜನರಲ್ ಇಂಡಿಯಾಗೆ ಕೇವಲ ರೂ. 574.80 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ದಶಕದಿಂದ ಕಾಯುತ್ತಿರುವ ಜನಗಣತಿ ಈ ವರ್ಷವೂ ನಡೆಯುವುದು ಅನುಮಾನವಾಗಿದೆ.

2019 ರಲ್ಲಿ ಕೇಂದ್ರ ಸರ್ಕಾರವು 2021 ರ ರಾಷ್ಟ್ರೀಯ ಜನಗಣತಿಯನ್ನು ರೂ. 8,754.23 ಕೋಟಿ ವೆಚ್ಚದಲ್ಲಿ ನಡೆಸಲು ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಯನ್ನು ರೂ. 3,941.35 ಕೋಟಿ ವೆಚ್ಚದಲ್ಲಿ ನವೀಕರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತ್ತು. ಆದರೆ ಕೋವಿಡ್ ಕಾರಣದಿಂದ 2021ರಲ್ಲಿ ಜನಗಣತಿ ನಡೆದಿರಲಿಲ್ಲ.

2021-22ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಜನಗಣತಿ ಮತ್ತು ಎನ್ ಪಿಆರ್ ಗೆ 3,768 ಕೋಟಿ ಹಂಚಿಕೆ ಮಾಡಲಾಗಿತ್ತು. ಅಲ್ಲದೆ ಕಳೆದ ವರ್ಷ ಮಂಡಿಸಿದ 2024-25ರಲ್ಲಿ 572 ಕೋಟಿ. ರೂ. ಮೀಸಲಿಡಲಾಗಿತ್ತು. ಆದರೆ ಈ ಬಾರಿಯ ಅನುದಾನ ಗಮನಿಸಿದರೆ ಈ ವರ್ಷವೂ ಜನಗಣತಿ ನಡೆಯುವುದು ಅನುಮಾನವಾಗಿದೆ.

ಜನಗಣತಿ ಮತ್ತು NPR ಸಿದ್ಧಪಡಿಸುವ ಸಂಪೂರ್ಣ ಪ್ರಕ್ರಿಯೆಗೆ ಸುಮಾರು 12,000 ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT