ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: 'ಚೋಲಿ ಕೆ ಪೀಚೆ ಕ್ಯಾ ಹೈ' ಎಂದ ವರ; ಸಿಟ್ಟಿಗೆದ್ದ ಮಾವ; ಮದುವೆಯೇ ಕ್ಯಾನ್ಸಲ್!

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆತನ ಸ್ನೇಹಿತರು ವರನಿಗೆ ನೃತ್ಯ ಮಾಡಲು ಒತ್ತಾಯಿಸಿದರು. ಹಾಡು ಪ್ಲೇ ಆಗಲು ಪ್ರಾರಂಭಿಸಿದಾಗ, ವರ ಹೆಜ್ಜೆಹಾಕಲು ಮುಂದಾಗಿದ್ದಾನೆ.

ನವದೆಹಲಿ: ವರನೊಬ್ಬ ತನ್ನ ಮದುವೆಯಲ್ಲಿ ಬಾಲಿವುಡ್‌ನ ಜನಪ್ರಿಯ 'ಚೋಲಿ ಕೆ ಪೀಚೆ ಕ್ಯಾ ಹೈ' ಹಾಡಿಗೆ ನೃತ್ಯ ಮಾಡಿ ಸಂಕಟಕ್ಕೆ ಸಿಲುಕಿಕೊಂಡಿದ್ದಾನೆ. ಹಾಡಿಗೆ ನೃತ್ಯ ಮಾಡುವಂತೆ ವರನ ಸ್ನೇಹಿತರು ಬಲವಂತ ಪಡಿಸಿದ್ದರಿಂದ ಹೆಜ್ಜೆ ಹಾಕಿದ ನಂತರ ವಧುವಿನ ತಂದೆ ಮದುವೆಯನ್ನು ರದ್ದುಗೊಳಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ವರನು ಮೆರವಣಿಗೆಯೊಂದಿಗೆ ವಿವಾಹ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ್ದಾನೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಆತನ ಸ್ನೇಹಿತರು ವರನಿಗೆ ನೃತ್ಯ ಮಾಡಲು ಒತ್ತಾಯಿಸಿದರು. ಹಾಡು ಪ್ಲೇ ಆಗಲು ಪ್ರಾರಂಭಿಸಿದಾಗ, ವರ ಹೆಜ್ಜೆಹಾಕಲು ಮುಂದಾದನು. ಕೆಲವು ಅತಿಥಿಗಳು ಕೂಡ ಆತನನ್ನು ಹುರಿದುಂಬಿಸಿದ್ದಾರೆ. ಆದರೆ, ವರನ ಈ ನಡೆಯಿಂದ ವಧುವಿನ ತಂದೆ ಕೋಪಗೊಂಡಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಹೇಳಿದೆ.

ವರ ನೃತ್ಯ ಮಾಡಿರುವುದನ್ನು ಅನುಚಿತ ಪ್ರದರ್ಶನ ಎಂದು ಕರೆದ ಅವರು ತಕ್ಷಣವೇ ಮದುವೆಯನ್ನು ರದ್ದುಗೊಳಿಸಿದ್ದಾರೆ. ವರನ ಈ ನಡೆಯು ತನ್ನ ಕುಟುಂಬದ ಮೌಲ್ಯಗಳನ್ನು ಅವಮಾನಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮದುವೆ ನಿಂತಿದ್ದಕ್ಕೆ ವಧು ಕಣ್ಣೀರು ಹಾಕಿದ್ದಾರೆ. ವರನು ತನ್ನ ಮಾವನೊಂದಿಗೆ ಮಾತುಕತೆ ಆಡಲು ಪ್ರಯತ್ನಿಸಿದರಾದರೂ ಅದು ಪ್ರಯೋಜನವಾಗಲಿಲ್ಲ.

ಈ ಸುದ್ದಿಯು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್‌ಗಳನ್ನು ಮಾಡಿದ್ದಾರೆ.

'ಮಾವ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ, ಇಲ್ಲದಿದ್ದರೆ, ಅವರು ಈ ನೃತ್ಯವನ್ನು ಪ್ರತಿದಿನ ನೋಡಬೇಕಾಗಿತ್ತು' ಎಂದು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

'ಇದು ಅರೇಂಜ್ಡ್ ಮ್ಯಾರೇಜ್ ಆಗಿರಲಿಲ್ಲ, ಇದು ಎಲಿಮಿನೇಷನ್ ರೌಂಡ್ ಆಗಿತ್ತು' ಎಂದು ಮತ್ತೊಬ್ಬರು ಬರೆದಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಚಂದೌಲಿಯಲ್ಲಿ ಊಟ ಬಡಿಸಲು ವಿಳಂಬ ಮಾಡಿದ ಕಾರಣ ವರನೊಬ್ಬ ತನ್ನ ಮದುವೆಯನ್ನು ರದ್ದುಗೊಳಿಸಿದ್ದ. ಅದೇ ದಿನ, ಅವನು ತನ್ನ ಸೋದರಸಂಬಂಧಿಯನ್ನು ಮದುವೆಯಾಗಿದ್ದನು. ವಧುವಿನ ಮನೆಯವರು ಪೊಲೀಸ್ ದೂರು ದಾಖಲಿಸಿದ್ದು, ಮದುವೆಗಾಗಿ ಖರ್ಚು ಮಾಡಿದ್ದ 7 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT