ರಾಹುಲ್ ಗಾಂಧಿ 
ದೇಶ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ದಿಢೀರ್ 70 ಲಕ್ಷ ಮತದಾರರ ಸೇರ್ಪಡೆ: ರಾಹುಲ್ ಗಾಂಧಿ

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಮಗ್ರತೆಯ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎತ್ತಿದರು.

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ನಡುವೆ ಮಹಾರಾಷ್ಟ್ರದಲ್ಲಿ, ಹಿಮಾಚಲ ಪ್ರದೇಶದ ಜನಸಂಖ್ಯೆಗೆ ಸಮಾನವಾದ ಸುಮಾರು 70 ಲಕ್ಷ ಮತದಾರರನ್ನು ದಿಢೀರ್ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ ಈ ಸಂಬಂಧ ಚುನಾವಣಾ ಆಯೋಗವು ರಾಜ್ಯದ ವಿರೋಧ ಪಕ್ಷಗಳಿಗೆ ಅಂಕಿಅಂಶಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಮಗ್ರತೆಯ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎತ್ತಿದರು.

ವಿರೋಧ ಪಕ್ಷಗಳು ಕೇಳಿದ ವಿವರಗಳನ್ನು ಚುನಾವಣಾ ಆಯೋಗ ಒದಗಿಸುವುದಿಲ್ಲ ಎಂಬುದು ನಮಗೆ ಗೊತ್ತು. ನಮ್ಮ ಜನರ ಮತ ಮತ್ತು ಮತದಾನಕ್ಕೆ ಸುರಕ್ಷತೆ ಇಲ್ಲದಿದ್ದರೆ ಸಂವಿಧಾನ ಬೆಲೆ ಇರುವುದಿಲ್ಲ" ಎಂದು ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದು ಹೇಳಿದರು.

"ಈಗ, ಮಹಾರಾಷ್ಟ್ರ ಚುನಾವಣೆಯ ಬಗ್ಗೆ ಕೆಲವು ಡೇಟಾವನ್ನು ನಾನು ಈ ಸದನದ ಗಮನಕ್ಕೆ ತರಲು ಬಯಸುತ್ತೇನೆ. ಇಂಡಿಯಾ ಬಣ ಗೆದ್ದ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ, ಹಿಮಾಚಲದ ಜನಸಂಖ್ಯೆಗೆ ಸಮಾನವಾದ ಸಂಖ್ಯೆಯನ್ನು ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ" ಎಂದು ಸದನಕ್ಕೆ ತಿಳಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹಾಜರಿದ್ದರು.

ಜೂನ್‌ನಲ್ಲಿ ನಡೆದ ಲೋಕಸಭಾ ಚುನಾವಣೆ ಮತ್ತು ನವೆಂಬರ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳ ನಡುವಿನ ವ್ಯತ್ಯಾಸವೆಂದರೆ ಸುಮಾರು 70 ಲಕ್ಷ ಮತದಾರರು ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಮಹಾರಾಷ್ಟ್ರದಲ್ಲಿ ಕಳೆದ 5 ವರ್ಷಗಳಲ್ಲಿ ಸೇರ್ಪಡೆಯಾದ ಮತದಾರರಿಗಿಂತ ಹೆಚ್ಚು ಮತದಾರರನ್ನು ವಿಧಾನಸಭೆ ಚುನಾವಣೆಗೆ ಹಿಂದಿನ 5 ತಿಂಗಳಲ್ಲಿ ಸೇರಿಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಹೊಸ ಮತದಾರರ ನೋಂದಣಿಗಳಲ್ಲಿ ಹೆಚ್ಚಿನವು ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಿ ಹೇಳಿದರು.

ಒಂದು ಉದಾಹರಣೆಯನ್ನು ಉಲ್ಲೇಖಿಸಿ, ಶಿರಡಿಯ ಕಟ್ಟಡವೊಂದರಲ್ಲಿ, ಲೋಕಸಭಾ ಚುನಾವಣೆಯ ನಂತರ ಸುಮಾರು 7,000 ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ಅವರು ತಿಳಿಸಿದರು.

"ನಾನು ಆರೋಪ ಮಾಡುತ್ತಿಲ್ಲ, ಹಿಮಾಚಲ ಪ್ರದೇಶದ ಜನಸಂಖ್ಯೆಗೆ ಸಮಾನವಾದ ಜನಸಂಖ್ಯೆಯನ್ನು ಲೋಕಸಭಾ ಚುನಾವಣೆಯ ನಂತರ ಮ್ಯಾಜಿಕ್ ಮೂಲಕ ಮಹಾರಾಷ್ಟ್ರದಲ್ಲಿ ಸೇರಿಸಲಾಗಿದೆ ಎಂಬ ಸಮಸ್ಯೆ ಇದೆ ಎಂದು ಹೇಳುತ್ತಿದ್ದೇನೆ" ಎಂದರು.

“ಚುನಾವಣಾ ಆಯೋಗ ದಯವಿಟ್ಟು ಲೋಕಸಭೆಯಲ್ಲಿರುವ ಎಲ್ಲಾ ಮತದಾರರ ಮತ್ತು ವಿಧಾನಸಭಾ ಸಭೆಯಲ್ಲಿರುವ ಎಲ್ಲಾ ಮತದಾರರ ಹೆಸರುಗಳು ಮತ್ತು ವಿಳಾಸಗಳು ಮತ್ತು ಮತಗಟ್ಟೆಗಳನ್ನು ನಮಗೆ ನೀಡಬೇಕು. ಇದರಿಂದ ಈ ಹೊಸ ಮತದಾರರು ಯಾರು ಎಂದು ನಾವು ಲೆಕ್ಕ ಹಾಕಬಹುದು. ಕುತೂಹಲಕಾರಿಯಾಗಿ ಹೊಸ ಮತದಾರರು ಹೆಚ್ಚಾಗಿ ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿದ್ದಾರೆ. ನಾನು ಇನ್ನೂ ಯಾವುದೇ ಆರೋಪ ಮಾಡುತ್ತಿಲ್ಲ. ಚುನಾವಣಾ ಆಯೋಗವು ಡೇಟಾವನ್ನು ನೀಡಬೇಕು ಎಂದು ನಾನು ಸದನದಲ್ಲಿ ಹೇಳುತ್ತಿದ್ದೇನೆ” ಎಂದು ರಾಹುಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT