ಮಹಾಕುಂಭಮೇಳ ಕಾಲ್ತುಳಿತ  online desk
ದೇಶ

Maha Kumbh ಕಾಲ್ತುಳಿತ ಹಿಂದೆ ಪಿತೂರಿ?: 16,000 ಮೊಬೈಲ್ ನಂಬರ್ ಗಳ ಮೇಲೆ ತನಿಖಾ ಆಯೋಗದ ಕಣ್ಣು!

ನಿಯಂತ್ರಣ ಕೊಠಡಿಯಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಾವಳಿಗಳಿಂದ ಶಂಕಿತರನ್ನು facial recognition app ಮೂಲಕ ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಯಾಗ್ ರಾಜ್: ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ದಿನದಂದು (ಜ.29) ಸಂಭವಿಸಿದ ಕಾಲ್ತುಳಿತ ದುರಂತದ ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ತನಿಖೆಗೆ ಆದೇಶಿಸಿದ್ದು, ತನಿಖಾಧಿಕಾರಿಗಳು ಪಿತೂರಿ ನಡೆದಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ತನಿಖಾ ತಂಡ ಕಾಲ್ತುಳಿತದ ದಿನದಂದು ಸಂಗಮದ ತುದಿ ಭಾಗದಲ್ಲಿ ಸಕ್ರಿಯವಾಗಿದ್ದ 16,000 ಮೊಬೈಲ್ ನಂಬರ್ ಗಳ ಮೇಲೆ ಕಣ್ಣಿಟ್ಟಿದ್ದು, ಈ ಕುರಿತ ಡೇಟಾ ಅನಾಲಿಸಿಸ್ ನಡೆಸುತ್ತಿದೆ.

ಸಂಗಮದ ತಟದಲ್ಲಿ ಅಂದು ಸಕ್ರಿಯವಾಗಿದ್ದ ಮೊಬೈಲ್ ನಂಬರ್ ಗಳ ಪೈಕಿ ಹಲವು ನಂಬರ್ ಗಳು ಈಗ ಸ್ವಿಚ್ ಆಫ್ ಆಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ.

ನಿಯಂತ್ರಣ ಕೊಠಡಿಯಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಾವಳಿಗಳಿಂದ ಶಂಕಿತರನ್ನು facial recognition app ಮೂಲಕ ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ವಸಂತ ಪಂಚಮಿಯ ಸಂದರ್ಭದಲ್ಲಿ ಸೋಮವಾರ ಬೆಳಿಗ್ಗೆ ನಡೆಯಲಿರುವ ಮೂರನೇ ಅಮೃತ ಸ್ನಾನಕ್ಕೆ ಮುಂಚಿತವಾಗಿ ಆವರಣಕ್ಕೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪೊಲೀಸರನ್ನು ಹೆಚ್ಚಿನ ಕಟ್ಟೆಚ್ಚರದಲ್ಲಿರಿಸಲಾಗಿದೆ.

ನಾಲ್ಕನೇ ಅಮೃತ ಸ್ನಾನ ಫೆಬ್ರವರಿ 12 ರಂದು ಮಾಘ ಪೂರ್ಣಿಮೆಯಂದು ನಡೆಯಲಿದ್ದರೆ, ಕೊನೆಯದು ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ನಡೆಯಲಿದೆ.

ಮೌನಿ ಅಮಾವಾಸ್ಯೆಯ ಅಮೃತ ಸ್ನಾನದಿನಂದು ಪವಿತ್ರ ಸ್ನಾನಕ್ಕಾಗಿ ಜನರು ಸೇರಿದ್ದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಜನಸಮೂಹವು ಬ್ಯಾರಿಕೇಡ್‌ಗಳನ್ನು ಹಾರಿ, ಇನ್ನೊಂದು ಬದಿಯಲ್ಲಿ ತಮ್ಮ ಸರದಿಗಾಗಿ ಕಾಯುತ್ತಿದ್ದವರಿಗೆ ಅನಾನುಕೂಲ ಉಂಟುಮಾಡಿತು.

ಕಾಲ್ತುಳಿತ ಘಟನೆಯ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಘಟನೆಯ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಮಿತಿಯು ತನ್ನ ತನಿಖೆಯನ್ನು ಮುಗಿಸಿ ವರದಿಯನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶವಿದೆ. 12 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಗಿ ಫೆ.26 ವರೆಗೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT