ಸಂಗ್ರಹ ಚಿತ್ರ 
ದೇಶ

ತಂದೆ ಅಂತ್ಯಕ್ರಿಯೆ ವೇಳೆ ಸಹೋದರರಿಬ್ಬರ ನಡುವೆ ಮನಸ್ತಾಪ: ಮೃತದೇಹ ಎರಡು ಭಾಗಕ್ಕೆ ಪಟ್ಟು..!

ತನ್ನ ಕಿರಿಯ ಮಗ ದೇಶರಾಜ್ ಜೊತೆ ವಾಸಿಸುತ್ತಿದ್ದ ಧ್ಯಾನಿ ಸಿಂಗ್ ಘೋಷ್ (84) ಎಂಬುವವರು, ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದರು.

ಟಿಕಮ್‌ಗಢ: ಮೃತಪಟ್ಟ ತಂದೆಯ ಅಂತ್ಯಕ್ರಿಯೆ ವೇಳೆ ಸಹೋದರರಿಬ್ಬರ ನಡುವೆ ಮನಸ್ತಾಪ ಎದುರಾಗಿದ್ದು, ಈ ವೇಳೆ ಮೃತದೇಹ ಎರಡು ಭಾಗ ಮಾಡುವಂತೆ ಪಟ್ಟು ಹಿಡಿದ ಘಟನೆಯೊಂದು ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಜಿಲ್ಲಾ ಕೇಂದ್ರದಿಂದ 45 ಕಿ.ಮೀ ದೂರದಲ್ಲಿರುವ ಲಿಧೋರಾತಾಲ್ ಗ್ರಾಮದಲ್ಲಿ ಭಾನುವಾರ ಗಲಾಟೆಯಾಗಿದೆ ಎಂದು ತಿಳಿದುಬಂದಿದೆ.

ತನ್ನ ಕಿರಿಯ ಮಗ ದೇಶರಾಜ್ ಜೊತೆ ವಾಸಿಸುತ್ತಿದ್ದ ಧ್ಯಾನಿ ಸಿಂಗ್ ಘೋಷ್ (84) ಎಂಬುವವರು, ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದರು. ಗ್ರಾಮದ ಹೊರಗೆ ವಾಸಿಸುತ್ತಿದ್ದ ಅವರ ಹಿರಿಯ ಮಗ ಕಿಶನ್ ಸಾವಿನ ಬಗ್ಗೆ ಮಾಹಿತಿ ತಿಳಿದ ಕೂಡಲೇ ಗ್ರಾಮಕ್ಕೆ ಬಂದಿದ್ದಾನೆ.

ಈ ವೇಳೆ ಹಿರಿಯ ಮಗನಾಗಿದ್ದು ತಂದೆಯ ಅಂತ್ಯಕ್ರಿಯೆಯನ್ನು ನಾನೇ ಮಾಡುತ್ತೇನೆ ಎಂದು ಕಿಶನ್ ಹೇಳಿದ್ದಾನೆ. ಈ ವೇಳೆ ದೇಶರಾಜ್, ನಾನೇ ಅಂತ್ಯಕ್ರಿಯೆ ನಡೆಸಬೇಕೆಂಬುದು ತಂದೆಯ ಕೊನೆಯ ಆಸೆಯಾಗಿತ್ತು ಎಂದು ಹೇಳಿದ್ದಾನೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಮದ್ಯಪಾನ ಮಾಡಿದ್ದ ಕಿಶನ್ ಮೃತದೇಹವನ್ನು ಭಾಗ ಮಾಡಿ, ಇಬ್ಬರಿಗೂ ನೀಡುವಂತೆ ಆಗ್ರಹಿಸಿದ್ದಾನೆ. ಈ ವೇಳೆ ಆಘಾತಗೊಂಡಿರುವ ಗ್ರಾಮಸ್ಥರೂ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನು ಸಮಾಧಾನಪಡಿಸಿದ್ದಾರೆ. ಬಳಿಕ ಕಿಶನ್ ಸ್ಥಳ ತೊರೆದಿದ್ದು, ಕಿರಿಯ ಮಗ ದೇಶರಾಜ್ ಅಂತ್ಯಕ್ರಿಯೆ ನೆರವೇರಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT