ಆರಾಧ್ಯ ಬಚ್ಚನ್, ಐಶ್ವರ್ಯ ರೈ 
ದೇಶ

ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!

ಈಗಾಗಲೇ ಪ್ರಕಟವಾಗಿರುವ ಸುದ್ದಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ಆರಾಧ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ ಸಂಬಂಧದಲ್ಲಿ ಬಿರುಕು ಮತ್ತಿತರ ವದಂತಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಈಗ ಬಿಗ್ ಬಿ ಮೊಮ್ಮಗಳು ಆರಾಧ್ಯ ಬಚ್ಚನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.

ನನ್ನ ಆರೋಗ್ಯ ಕುರಿತು ಹಲವು ವೆಬ್ ಸೈಟ್ ಹಾಗೂ ಯೂ ಟ್ಯೂಬ್ ಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಪ್ರಕಟವಾಗಿರುವ ಸುದ್ದಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ಆರಾಧ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

13 ವರ್ಷದ ಆರಾಧ್ಯ ಬಚ್ಚನ್ ಅವರ ಅರ್ಜಿ ಪುರಸ್ಕರಿಸಿರುವ ದೆಹಲಿ ಹೈಕೋರ್ಟ್ ಗೂಗಲ್ ನಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ಕಳುಹಿಸಿದೆ.

ಈ ಹಿಂದೆ 2023ರ ಏಪ್ರಿಲ್ 20 ರಂದು ಆರಾಧ್ಯ ಬಚ್ಚನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಆಕೆಯ ಆರೋಗ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಹಲವಾರು ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿತ್ತು. ಇಂತಹ ವಿಡಿಯೋಗಳನ್ನು ಯೂ ಟ್ಯೂಬ್ ನಿಂದ ತೆಗೆದುಹಾಕುವಂತೆ ಗೂಗಲ್ ಗೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT