ಅಂಗನವಾಡಿ (ಸಂಗ್ರಹ ಚಿತ್ರ) 
ದೇಶ

'ಉಪ್ಪಿಟ್ಟು ಬೇಡ.. ಬಿರಿಯಾನಿ, ಚಿಕನ್ ಫ್ರೈ ಬೇಕು': ಅಂಗನವಾಡಿ ಬಾಲಕನ ಬೇಡಿಕೆಗೆ ಉತ್ತರಿಸಿದ ಸಚಿವೆ!

ನೆರೆಯ ಕೇರಳದಲ್ಲಿ ಈ ಘಟನೆ ನಡೆದಿದ್ದು, ಥ್ರಾಜುಲ್ ಎಸ್ ಶಂಕರ್ (Thrajul S Sankar) ಬಾಲಕ ತನ್ನ ತಾಯಿಗೆ 'ಅಂಗನವಾಡಿಯಲ್ಲಿ ಉಪ್ಮಾ ಬದಲು ಬಿರಿಯಾನಿ (Biryani) ಮತ್ತು ಚಿಕನ್ ಫ್ರೈ ಬೇಕು' (chicken fry) ಎಂದು ಕೇಳಿದ್ದಾನೆ.

ತಿರುವನಂತಪುರಂ: ಅಂಗವಾಡಿಯಲ್ಲಿ ತಿನ್ನಲು ಉಪ್ಪಿಟ್ಟು ಕೊಟ್ಟಿದ್ದಕ್ಕೆ ನನಗೆ ಉಪ್ಪಿಟ್ಟು ಬೇಡ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡಿ ಎಂದು ಪುಟ್ಟ ಬಾಲಕ ಕೇಳಿರುವ ವಿಡಿಯೋ ವೈರಲ್ ಆಗುತ್ತಿದೆ.

ನೆರೆಯ ಕೇರಳದಲ್ಲಿ ಈ ಘಟನೆ ನಡೆದಿದ್ದು, ಥ್ರಾಜುಲ್ ಎಸ್ ಶಂಕರ್ (Thrajul S Sankar) ಬಾಲಕ ತನ್ನ ತಾಯಿಗೆ 'ಅಂಗನವಾಡಿಯಲ್ಲಿ ಉಪ್ಮಾ ಬದಲು ಬಿರಿಯಾನಿ (Biryani) ಮತ್ತು ಚಿಕನ್ ಫ್ರೈ ಬೇಕು' (chicken fry) ಎಂದು ಕೇಳಿದ್ದಾನೆ. ಈ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಈ ಬಗ್ಗೆ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

ಇಷ್ಟಕ್ಕೂ ವಿಡಿಯೋದಲ್ಲೇನಿದೆ?

ವೈರಲ್ ವಿಡಿಯೋದಲ್ಲಿ, ಕ್ಯಾಪ್ ಧರಿಸಿರುವ ಶಂಕು, "ನನಗೆ ಅಂಗನವಾಡಿಯಲ್ಲಿ ಉಪ್ಮಾ ಬದಲಿಗೆ ಬಿರಿಯಾನಿ ಮತ್ತು 'ಪೊರಿಚಾ ಕೋಜಿ' (ಚಿಕನ್ ಫ್ರೈ) ಬೇಕು" ಎಂದು ಹೇಳುತ್ತಿದ್ದಾನೆ. ಈ ಬಾಲಕನ ವಿನಂತಿಯು ಎಷ್ಟು ಗಮನ ಸೆಳೆಯಿತು ಎಂದರೆ ಕೆಲವರು ಅವರಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ಕಳಿಸಲು ಸಹ ಮುಂದಾಗಿದ್ದಾರೆ.

ಅಂಗನವಾಡಿ ಮೆನು ಚೇಂಜ್?

ಬಾಲಕ ಈ ವಿಡಿಯೋ ವೈರಲ್ ಆಗುತ್ತಲೇ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವೆ ವೀಣಾ ಜಾರ್ಜ್, 'ಮಕ್ಕಳ ಪೋಷಣೆಯನ್ನು ಖಚಿತಪಡಿಸಿಕೊಳ್ಳಲು ಅಂಗನವಾಡಿಗಳು ಈಗಾಗಲೇ ವಿವಿಧ ಆಹಾರ ಪದಾರ್ಥಗಳನ್ನು ಒದಗಿಸುತ್ತಿವೆ. ಅದಾಗ್ಯೂ ಈ ಸರ್ಕಾರದ ಅಡಿಯಲ್ಲಿ ಅಂಗನವಾಡಿಗಳ ಮೂಲಕ ಮೊಟ್ಟೆ ಮತ್ತು ಹಾಲು ನೀಡುವ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯದಲ್ಲಿ ಸ್ಥಳೀಯ ಸಂಸ್ಥೆಗಳು ಅಂಗನವಾಡಿಗಳಲ್ಲಿ ವಿವಿಧ ಆಹಾರಗಳನ್ನು ಒದಗಿಸುತ್ತಿವೆ ಎಂದು ಹೇಳಿದ್ದಾರೆ.

ಅಲ್ಲದೆ ಶಂಕು ಅವರ ಸಲಹೆಯನ್ನು ಆಧರಿಸಿ ಅಂಗನವಾಡಿ ಮೆನುವನ್ನು ಪರಿಷ್ಕರಿಸಲು ಸರ್ಕಾರ ಪರಿಗಣಿಸುತ್ತದೆ ಎಂದೂ ವೀಣಾ ಜಾರ್ಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

SCROLL FOR NEXT