ದೇಶ

ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಭೇಟಿ; ದೆಹಲಿ ಪೊಲೀಸರಿಂದ ಮತದಾರರಿಗೆ ಬೆದರಿಕೆ ಆರೋಪ

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಜ್ರಿವಾಲ್, ಮತದಾರರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಬಿಜೆಪಿ ಮತ್ತು ದೆಹಲಿ ಪೊಲೀಸರು "ಗೂಂಡಾಗಿರಿ"ಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಕ್ಷಣಗಣೆನೆ ಆರಂಭವಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿ ಮುಖ್ಯಮಂತ್ರಿ ಅತಿಶಿ ಅವರೊಂದಿಗೆ ಮಂಗಳವಾರ ಚುನಾವಣಾ ಆಯೋಗ(ಇಸಿ)ಕ್ಕೆ ಭೇಟಿ ಮಾಡಿ, ಮತದಾನಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಮತದಾರರಿಗೆ ಬೆದರಿಕೆ ತಂತ್ರಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಜ್ರಿವಾಲ್, ಮತದಾರರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಬಿಜೆಪಿ ಮತ್ತು ದೆಹಲಿ ಪೊಲೀಸರು "ಗೂಂಡಾಗಿರಿ"ಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

"ಹಿಂಸೆ ಮತ್ತು ಬೆದರಿಕೆಗಾಗಿ ದೆಹಲಿ ಪೊಲೀಸರನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ನಾವು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅನೇಕ ಜನರು ಭಯಭೀತರಾಗಿದ್ದಾರೆ ಮತ್ತು ಭಯದಿಂದಾಗಿ ಅವರು ಮತದಾನಕ್ಕೆ ಬರದಿರಬಹುದು" ಎಂದು ದೆಹಲಿ ಮಾಜಿ ಸಿಎಂ ಹೇಳಿದರು.

ಮತದಾರರ ಮತದಾನವನ್ನು ವಿಶೇಷವಾಗಿ ಕೊಳೆಗೇರಿ ನಿವಾಸಿಗಳಲ್ಲಿ ನಿಗ್ರಹಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.

"ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಅವರ ಬೆರಳುಗಳಿಗೆ ಕಪ್ಪು ಶಾಯಿಯಿಂದ ಗುರುತು ಹಾಕಲಾಗುತ್ತಿದೆ ಮತ್ತು ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಾಗೂ ಬೆದರಿಕೆ ಹಾಕಲಾಗುತ್ತಿದೆ ಎಂಬ ವರದಿಗಳಿವೆ. ನಾವು ಈ ಕಳವಳಗಳನ್ನು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ" ಎಂದು ಕೇಜ್ರಿವಾಲ್ ಹೇಳಿದರು.

ಭೇಟಿಗೆ ಅವಕಾಶ ನೀಡಿದ್ದಕ್ಕಾಗಿ ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುತ್ತೇನೆ ಮತ್ತು ಅಧಿಕಾರಿಗಳು ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಸುವ ಭರವಸೆ ನೀಡಿದ್ದಾರೆ ಎಂದರು.

"ಮತದಾನದ ಹಕ್ಕನ್ನು ಕಸಿದುಕೊಳ್ಳುವಂತಹ ಯಾವುದೇ ತಪ್ಪುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಚುನಾವಣಾ ಆಯೋಗ ನಮಗೆ ಭರವಸೆ ನೀಡಿದೆ" ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT