ರಿತಬ್ರತ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳವನ್ನು 'ಬಾಂಗ್ಲಾ' ಎಂದು ಮರುನಾಮಕರಣ ಮಾಡುವಂತೆ ಟಿಎಂಸಿ ಒತ್ತಾಯ

ಇಂದು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಟಿಎಂಸಿ ಸಂಸದ ರಿತಬ್ರತ ಬ್ಯಾನರ್ಜಿ, ಪಶ್ಚಿಮ ಬಂಗಾಳ ವಿಧಾನಸಭೆ ಜುಲೈ 2018 ರಲ್ಲಿ ಹೆಸರು ಬದಲಾವಣೆಗೆ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು.

ನವದೆಹಲಿ: ಪಶ್ಚಿಮ ಬಂಗಾಳವನ್ನು 'ಬಾಂಗ್ಲಾ' ಎಂದು ಮರುನಾಮಕರಣ ಮಾಡಬೇಕು ಎಂಬ ಬೇಡಿಕೆ ಮಂಗಳವಾರ ರಾಜ್ಯಸಭೆಯಲ್ಲಿ ಕೇಳಿಬಂದಿದ್ದು, ಹೊಸ ಹೆಸರು ರಾಜ್ಯದ ಇತಿಹಾಸ ಮತ್ತು ಸಂಸ್ಕೃತಿಯನ್ನು ಉತ್ತಮವಾಗಿ ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಾದಿಸಿದೆ.

ಇಂದು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಟಿಎಂಸಿ ಸಂಸದ ರಿತಬ್ರತ ಬ್ಯಾನರ್ಜಿ, ಪಶ್ಚಿಮ ಬಂಗಾಳ ವಿಧಾನಸಭೆ ಜುಲೈ 2018 ರಲ್ಲಿ ಹೆಸರು ಬದಲಾವಣೆಗೆ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಆದರೆ ಕೇಂದ್ರ ಸರ್ಕಾರ ಇದುವರೆಗೂ ಅದನ್ನು ಇನ್ನೂ ಅನುಮೋದಿಸಿಲ್ಲ ಎಂದು ಎತ್ತಿ ತೋರಿಸಿದರು.

ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಮರುನಾಮಕರಣವು ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಗುರುತಿನೊಂದಿಗೆ ಹೊಂದಿಕೆಯಾಗುತ್ತದೆ ಮತ್ತು ಜನರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಒತ್ತಾಯಿಸಿದರು.

1947 ರ ವಿಭಜನೆಯು ಬಂಗಾಳವನ್ನು ವಿಭಜಿಸಿತು. ಈ ವೇಳೆ ಭಾರತದ ಭಾಗವನ್ನು ಪಶ್ಚಿಮ ಬಂಗಾಳ ಎಂದು ಕರೆಯಲಾಯಿತು ಮತ್ತು ಇನ್ನೊಂದು ಭಾಗವನ್ನು ಪೂರ್ವ ಪಾಕಿಸ್ತಾನ ಎಂದು ಹೆಸರಿಸಲಾಯಿತು. 1971ರಲ್ಲಿ, ಪೂರ್ವ ಪಾಕಿಸ್ತಾನ ಸ್ವಾತಂತ್ರ್ಯ ಘೋಷಿಸಿತು ಮತ್ತು ಬಾಂಗ್ಲಾದೇಶ ಎಂಬ ಹೊಸ ರಾಷ್ಟ್ರ ರಚನೆಯಾಯಿತು.

“ಇಂದು, ಪೂರ್ವ ಪಾಕಿಸ್ತಾನವಿಲ್ಲ. ನಮ್ಮ ರಾಜ್ಯದ ಹೆಸರನ್ನು ಬದಲಾಯಿಸಬೇಕಾಗಿದೆ. ಪಶ್ಚಿಮ ಬಂಗಾಳದ ಜನರ ಆದೇಶವನ್ನು ಗೌರವಿಸಬೇಕಾಗಿದೆ.” ಎಂದು ಅವರು ಹೇಳಿದ್ದಾರೆ.

2011 ರಲ್ಲಿ ಒರಿಸ್ಸಾ ರಾಜ್ಯದ ಹೆಸರನ್ನು ಒಡಿಶಾ ಎಂದು ಬದಲಾಯಿಸಲಾಯಿತು. ಅದಾದ ಬಳಿಕ ಯಾವುದೇ ರಾಜ್ಯದ ಹೆಸರನ್ನು ಬದಲಾಯಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT